Advertisement
ಸುದ್ದಿಗಳು

ಪ.ಜಾತಿ ಮಹಿಳೆಯ ಕೃಷಿ ಜಾಗವನ್ನು ಘನತ್ಯಾಜ್ಯ ವಿಲೇವಾರಿಗೆ ಗುರುತಿಸದಂತೆ ಮನವಿ

Share

ಸುಳ್ಯ:ಅಜ್ಜಾವರ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಪ.ಜಾತಿ ಮಹಿಳೆಯೊಬ್ಬರು ರಬ್ಬರ್ ಕೃಷಿ ಮಾಡಿಕೊಂಡು ಬಂದ ಜಾಗವನ್ನು ಇದೀಗ ಅಜ್ಜಾವರ ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿ ಮಾಡಲು ಗುರುತಿಸಿದೆ. ಗ್ರಾ.ಪಂ.ನವರು ಕೈಗೊಂಡಿರುವ ಈ ನಿರ್ಧಾರವನ್ನು ಕೈ ಬಿಟ್ಟು ಆ ಜಾಗವನ್ನು ಆ ಮಹಿಳೆಗೇ ಬಿಟ್ಟು ಕೊಡಬೇಕೆಂದು ಮನವಿ ಮಾಡುತ್ತೇವೆ ಎಂದು ಆದಿದ್ರಾವಿಡ ಸಮುದಾಯದ ಪ್ರಮುಖರಾದ ಕೆ.ಎಂ.ಬಾಬು ಜಾಲ್ಸೂರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ನೇಲ್ಯಡ್ಕದಲ್ಲಿ ಸುಶೀಲರವರು ೨ ಎಕ್ರೆ ಜಾಗದಲ್ಲಿ ೬೦೦ ರಬ್ಬರ್ ಕೃಷಿ ಮಾಡಿದ್ದು, ಅದರಲ್ಲಿ ೪೫೦ ಗಿಡಗಳು ಈಗ ಹಾಲು ಟ್ಯಾಪಿಂಗ್ ಮಾಡಲಾಗುತ್ತಿದೆ. ಇದು ಸರಕಾರಿ ಜಮೀನು. ಇದನ್ನು ಅಕ್ರಮ ಸಕ್ರಮದಲ್ಲಿ ಮಾಡಿಕೊಳ್ಳಲು ಅವರು ಅರ್ಜಿಯನ್ನು ಹಾಕಿದ್ದಾರೆ.

ಇದೀಗ ಈ ಜಾಗವನ್ನು ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿದ್ದು ಇದರಿಂದ ಇವರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಘನತ್ಯಾಜ್ಯಕ್ಕೆ ಬೇರೆ ಜಾಗ ಗುರುತಿಸುವಂತೆ ವಿನಂತಿಸಿದ ಅವರು ಇದೇ ಸರ್ವೆ ನಂಬರ್‌ನಲ್ಲಿ ಒಟ್ಟು ೭.೭೩ ಎಕ್ರೆ ಸರಕಾರಿ ಜಮೀನು ಇದೆ. ಅದರಲ್ಲಿ ೨ ಎಕ್ರೆ ಸುಶೀಲರು ಕೃಷಿ ಮಾಡಿದರೆ ಉಳಿದ ಜಾಗವೂ ಒತ್ತುವರಿಯಾಗಿದೆ. ಅದೆಲ್ಲವನ್ನು ಬಿಟ್ಟು ಇವರ ಜಾಗ ಮಾತ್ರ ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿರುವುದು ಸರಿಯಲ್ಲ. ಇದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಜಿಲ್ಲಾಧಿಕಾರಿ ಸೇರಿದಂತೆ ಹಲವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ಕೆ.ಎಂ.ಬಾಬು ಹೇಳಿದರು.

ಸುಶೀಲಾ ಮಾತನಾಡಿ ಅಕ್ರಮ ಸಕ್ರಮದಡಿಯಲ್ಲಿ ಅರ್ಜಿ ಅಲ್ಲಿಸಲಾಗಿದ್ದು ಕೃಷಿ ಮಾಡಿದ ಆ ಜಾಗವನ್ನು ತನ್ನ ಹೆಸರಿಗೆ ನೀಡಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರತ್ನಾವತಿ ಉದ್ದಂತಡ್ಕ, ವಿಶ್ವನಾಥ ಉದ್ದಂತಡ್ಕ, ಸತೀಶ್ ನೆಲ್ಯಡ್ಕ, ರವಿ ಪಿಲಿಕೋಡಿ, ಮಂಜುನಾಥ ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago