Advertisement
ಸುದ್ದಿಗಳು

ಪ.ಜಾತಿ ಮಹಿಳೆಯ ಕೃಷಿ ಜಾಗವನ್ನು ಘನತ್ಯಾಜ್ಯ ವಿಲೇವಾರಿಗೆ ಗುರುತಿಸದಂತೆ ಮನವಿ

Share

ಸುಳ್ಯ:ಅಜ್ಜಾವರ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಪ.ಜಾತಿ ಮಹಿಳೆಯೊಬ್ಬರು ರಬ್ಬರ್ ಕೃಷಿ ಮಾಡಿಕೊಂಡು ಬಂದ ಜಾಗವನ್ನು ಇದೀಗ ಅಜ್ಜಾವರ ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿ ಮಾಡಲು ಗುರುತಿಸಿದೆ. ಗ್ರಾ.ಪಂ.ನವರು ಕೈಗೊಂಡಿರುವ ಈ ನಿರ್ಧಾರವನ್ನು ಕೈ ಬಿಟ್ಟು ಆ ಜಾಗವನ್ನು ಆ ಮಹಿಳೆಗೇ ಬಿಟ್ಟು ಕೊಡಬೇಕೆಂದು ಮನವಿ ಮಾಡುತ್ತೇವೆ ಎಂದು ಆದಿದ್ರಾವಿಡ ಸಮುದಾಯದ ಪ್ರಮುಖರಾದ ಕೆ.ಎಂ.ಬಾಬು ಜಾಲ್ಸೂರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ನೇಲ್ಯಡ್ಕದಲ್ಲಿ ಸುಶೀಲರವರು ೨ ಎಕ್ರೆ ಜಾಗದಲ್ಲಿ ೬೦೦ ರಬ್ಬರ್ ಕೃಷಿ ಮಾಡಿದ್ದು, ಅದರಲ್ಲಿ ೪೫೦ ಗಿಡಗಳು ಈಗ ಹಾಲು ಟ್ಯಾಪಿಂಗ್ ಮಾಡಲಾಗುತ್ತಿದೆ. ಇದು ಸರಕಾರಿ ಜಮೀನು. ಇದನ್ನು ಅಕ್ರಮ ಸಕ್ರಮದಲ್ಲಿ ಮಾಡಿಕೊಳ್ಳಲು ಅವರು ಅರ್ಜಿಯನ್ನು ಹಾಕಿದ್ದಾರೆ.

ಇದೀಗ ಈ ಜಾಗವನ್ನು ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿದ್ದು ಇದರಿಂದ ಇವರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಘನತ್ಯಾಜ್ಯಕ್ಕೆ ಬೇರೆ ಜಾಗ ಗುರುತಿಸುವಂತೆ ವಿನಂತಿಸಿದ ಅವರು ಇದೇ ಸರ್ವೆ ನಂಬರ್‌ನಲ್ಲಿ ಒಟ್ಟು ೭.೭೩ ಎಕ್ರೆ ಸರಕಾರಿ ಜಮೀನು ಇದೆ. ಅದರಲ್ಲಿ ೨ ಎಕ್ರೆ ಸುಶೀಲರು ಕೃಷಿ ಮಾಡಿದರೆ ಉಳಿದ ಜಾಗವೂ ಒತ್ತುವರಿಯಾಗಿದೆ. ಅದೆಲ್ಲವನ್ನು ಬಿಟ್ಟು ಇವರ ಜಾಗ ಮಾತ್ರ ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿರುವುದು ಸರಿಯಲ್ಲ. ಇದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಜಿಲ್ಲಾಧಿಕಾರಿ ಸೇರಿದಂತೆ ಹಲವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ಕೆ.ಎಂ.ಬಾಬು ಹೇಳಿದರು.

ಸುಶೀಲಾ ಮಾತನಾಡಿ ಅಕ್ರಮ ಸಕ್ರಮದಡಿಯಲ್ಲಿ ಅರ್ಜಿ ಅಲ್ಲಿಸಲಾಗಿದ್ದು ಕೃಷಿ ಮಾಡಿದ ಆ ಜಾಗವನ್ನು ತನ್ನ ಹೆಸರಿಗೆ ನೀಡಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರತ್ನಾವತಿ ಉದ್ದಂತಡ್ಕ, ವಿಶ್ವನಾಥ ಉದ್ದಂತಡ್ಕ, ಸತೀಶ್ ನೆಲ್ಯಡ್ಕ, ರವಿ ಪಿಲಿಕೋಡಿ, ಮಂಜುನಾಥ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

18 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 days ago