Advertisement
ಸುದ್ದಿಗಳು

ಪ.ಜಾತಿ ಮಹಿಳೆಯ ಕೃಷಿ ಜಾಗವನ್ನು ಘನತ್ಯಾಜ್ಯ ವಿಲೇವಾರಿಗೆ ಗುರುತಿಸದಂತೆ ಮನವಿ

Share

ಸುಳ್ಯ:ಅಜ್ಜಾವರ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಪ.ಜಾತಿ ಮಹಿಳೆಯೊಬ್ಬರು ರಬ್ಬರ್ ಕೃಷಿ ಮಾಡಿಕೊಂಡು ಬಂದ ಜಾಗವನ್ನು ಇದೀಗ ಅಜ್ಜಾವರ ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿ ಮಾಡಲು ಗುರುತಿಸಿದೆ. ಗ್ರಾ.ಪಂ.ನವರು ಕೈಗೊಂಡಿರುವ ಈ ನಿರ್ಧಾರವನ್ನು ಕೈ ಬಿಟ್ಟು ಆ ಜಾಗವನ್ನು ಆ ಮಹಿಳೆಗೇ ಬಿಟ್ಟು ಕೊಡಬೇಕೆಂದು ಮನವಿ ಮಾಡುತ್ತೇವೆ ಎಂದು ಆದಿದ್ರಾವಿಡ ಸಮುದಾಯದ ಪ್ರಮುಖರಾದ ಕೆ.ಎಂ.ಬಾಬು ಜಾಲ್ಸೂರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ನೇಲ್ಯಡ್ಕದಲ್ಲಿ ಸುಶೀಲರವರು ೨ ಎಕ್ರೆ ಜಾಗದಲ್ಲಿ ೬೦೦ ರಬ್ಬರ್ ಕೃಷಿ ಮಾಡಿದ್ದು, ಅದರಲ್ಲಿ ೪೫೦ ಗಿಡಗಳು ಈಗ ಹಾಲು ಟ್ಯಾಪಿಂಗ್ ಮಾಡಲಾಗುತ್ತಿದೆ. ಇದು ಸರಕಾರಿ ಜಮೀನು. ಇದನ್ನು ಅಕ್ರಮ ಸಕ್ರಮದಲ್ಲಿ ಮಾಡಿಕೊಳ್ಳಲು ಅವರು ಅರ್ಜಿಯನ್ನು ಹಾಕಿದ್ದಾರೆ.

ಇದೀಗ ಈ ಜಾಗವನ್ನು ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿದ್ದು ಇದರಿಂದ ಇವರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಘನತ್ಯಾಜ್ಯಕ್ಕೆ ಬೇರೆ ಜಾಗ ಗುರುತಿಸುವಂತೆ ವಿನಂತಿಸಿದ ಅವರು ಇದೇ ಸರ್ವೆ ನಂಬರ್‌ನಲ್ಲಿ ಒಟ್ಟು ೭.೭೩ ಎಕ್ರೆ ಸರಕಾರಿ ಜಮೀನು ಇದೆ. ಅದರಲ್ಲಿ ೨ ಎಕ್ರೆ ಸುಶೀಲರು ಕೃಷಿ ಮಾಡಿದರೆ ಉಳಿದ ಜಾಗವೂ ಒತ್ತುವರಿಯಾಗಿದೆ. ಅದೆಲ್ಲವನ್ನು ಬಿಟ್ಟು ಇವರ ಜಾಗ ಮಾತ್ರ ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿರುವುದು ಸರಿಯಲ್ಲ. ಇದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಜಿಲ್ಲಾಧಿಕಾರಿ ಸೇರಿದಂತೆ ಹಲವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ಕೆ.ಎಂ.ಬಾಬು ಹೇಳಿದರು.

ಸುಶೀಲಾ ಮಾತನಾಡಿ ಅಕ್ರಮ ಸಕ್ರಮದಡಿಯಲ್ಲಿ ಅರ್ಜಿ ಅಲ್ಲಿಸಲಾಗಿದ್ದು ಕೃಷಿ ಮಾಡಿದ ಆ ಜಾಗವನ್ನು ತನ್ನ ಹೆಸರಿಗೆ ನೀಡಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರತ್ನಾವತಿ ಉದ್ದಂತಡ್ಕ, ವಿಶ್ವನಾಥ ಉದ್ದಂತಡ್ಕ, ಸತೀಶ್ ನೆಲ್ಯಡ್ಕ, ರವಿ ಪಿಲಿಕೋಡಿ, ಮಂಜುನಾಥ ಇದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

4 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

10 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

14 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

23 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

23 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago