Advertisement
ಸುದ್ದಿಗಳು

ಪ.ಜಾತಿ ಮಹಿಳೆಯ ಕೃಷಿ ಜಾಗವನ್ನು ಘನತ್ಯಾಜ್ಯ ವಿಲೇವಾರಿಗೆ ಗುರುತಿಸದಂತೆ ಮನವಿ

Share

ಸುಳ್ಯ:ಅಜ್ಜಾವರ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಪ.ಜಾತಿ ಮಹಿಳೆಯೊಬ್ಬರು ರಬ್ಬರ್ ಕೃಷಿ ಮಾಡಿಕೊಂಡು ಬಂದ ಜಾಗವನ್ನು ಇದೀಗ ಅಜ್ಜಾವರ ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿ ಮಾಡಲು ಗುರುತಿಸಿದೆ. ಗ್ರಾ.ಪಂ.ನವರು ಕೈಗೊಂಡಿರುವ ಈ ನಿರ್ಧಾರವನ್ನು ಕೈ ಬಿಟ್ಟು ಆ ಜಾಗವನ್ನು ಆ ಮಹಿಳೆಗೇ ಬಿಟ್ಟು ಕೊಡಬೇಕೆಂದು ಮನವಿ ಮಾಡುತ್ತೇವೆ ಎಂದು ಆದಿದ್ರಾವಿಡ ಸಮುದಾಯದ ಪ್ರಮುಖರಾದ ಕೆ.ಎಂ.ಬಾಬು ಜಾಲ್ಸೂರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ನೇಲ್ಯಡ್ಕದಲ್ಲಿ ಸುಶೀಲರವರು ೨ ಎಕ್ರೆ ಜಾಗದಲ್ಲಿ ೬೦೦ ರಬ್ಬರ್ ಕೃಷಿ ಮಾಡಿದ್ದು, ಅದರಲ್ಲಿ ೪೫೦ ಗಿಡಗಳು ಈಗ ಹಾಲು ಟ್ಯಾಪಿಂಗ್ ಮಾಡಲಾಗುತ್ತಿದೆ. ಇದು ಸರಕಾರಿ ಜಮೀನು. ಇದನ್ನು ಅಕ್ರಮ ಸಕ್ರಮದಲ್ಲಿ ಮಾಡಿಕೊಳ್ಳಲು ಅವರು ಅರ್ಜಿಯನ್ನು ಹಾಕಿದ್ದಾರೆ.

ಇದೀಗ ಈ ಜಾಗವನ್ನು ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿದ್ದು ಇದರಿಂದ ಇವರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಘನತ್ಯಾಜ್ಯಕ್ಕೆ ಬೇರೆ ಜಾಗ ಗುರುತಿಸುವಂತೆ ವಿನಂತಿಸಿದ ಅವರು ಇದೇ ಸರ್ವೆ ನಂಬರ್‌ನಲ್ಲಿ ಒಟ್ಟು ೭.೭೩ ಎಕ್ರೆ ಸರಕಾರಿ ಜಮೀನು ಇದೆ. ಅದರಲ್ಲಿ ೨ ಎಕ್ರೆ ಸುಶೀಲರು ಕೃಷಿ ಮಾಡಿದರೆ ಉಳಿದ ಜಾಗವೂ ಒತ್ತುವರಿಯಾಗಿದೆ. ಅದೆಲ್ಲವನ್ನು ಬಿಟ್ಟು ಇವರ ಜಾಗ ಮಾತ್ರ ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿರುವುದು ಸರಿಯಲ್ಲ. ಇದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಜಿಲ್ಲಾಧಿಕಾರಿ ಸೇರಿದಂತೆ ಹಲವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ಕೆ.ಎಂ.ಬಾಬು ಹೇಳಿದರು.

ಸುಶೀಲಾ ಮಾತನಾಡಿ ಅಕ್ರಮ ಸಕ್ರಮದಡಿಯಲ್ಲಿ ಅರ್ಜಿ ಅಲ್ಲಿಸಲಾಗಿದ್ದು ಕೃಷಿ ಮಾಡಿದ ಆ ಜಾಗವನ್ನು ತನ್ನ ಹೆಸರಿಗೆ ನೀಡಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರತ್ನಾವತಿ ಉದ್ದಂತಡ್ಕ, ವಿಶ್ವನಾಥ ಉದ್ದಂತಡ್ಕ, ಸತೀಶ್ ನೆಲ್ಯಡ್ಕ, ರವಿ ಪಿಲಿಕೋಡಿ, ಮಂಜುನಾಥ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

11 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

16 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

17 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago