Advertisement
ಸುದ್ದಿಗಳು

ಪ.ಜಾತಿ ಮಹಿಳೆಯ ಕೃಷಿ ಜಾಗವನ್ನು ಘನತ್ಯಾಜ್ಯ ವಿಲೇವಾರಿಗೆ ಗುರುತಿಸದಂತೆ ಮನವಿ

Share

ಸುಳ್ಯ:ಅಜ್ಜಾವರ ಗ್ರಾಮದ ನೆಲ್ಯಡ್ಕ ಎಂಬಲ್ಲಿ ಪ.ಜಾತಿ ಮಹಿಳೆಯೊಬ್ಬರು ರಬ್ಬರ್ ಕೃಷಿ ಮಾಡಿಕೊಂಡು ಬಂದ ಜಾಗವನ್ನು ಇದೀಗ ಅಜ್ಜಾವರ ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿ ಮಾಡಲು ಗುರುತಿಸಿದೆ. ಗ್ರಾ.ಪಂ.ನವರು ಕೈಗೊಂಡಿರುವ ಈ ನಿರ್ಧಾರವನ್ನು ಕೈ ಬಿಟ್ಟು ಆ ಜಾಗವನ್ನು ಆ ಮಹಿಳೆಗೇ ಬಿಟ್ಟು ಕೊಡಬೇಕೆಂದು ಮನವಿ ಮಾಡುತ್ತೇವೆ ಎಂದು ಆದಿದ್ರಾವಿಡ ಸಮುದಾಯದ ಪ್ರಮುಖರಾದ ಕೆ.ಎಂ.ಬಾಬು ಜಾಲ್ಸೂರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ನೇಲ್ಯಡ್ಕದಲ್ಲಿ ಸುಶೀಲರವರು ೨ ಎಕ್ರೆ ಜಾಗದಲ್ಲಿ ೬೦೦ ರಬ್ಬರ್ ಕೃಷಿ ಮಾಡಿದ್ದು, ಅದರಲ್ಲಿ ೪೫೦ ಗಿಡಗಳು ಈಗ ಹಾಲು ಟ್ಯಾಪಿಂಗ್ ಮಾಡಲಾಗುತ್ತಿದೆ. ಇದು ಸರಕಾರಿ ಜಮೀನು. ಇದನ್ನು ಅಕ್ರಮ ಸಕ್ರಮದಲ್ಲಿ ಮಾಡಿಕೊಳ್ಳಲು ಅವರು ಅರ್ಜಿಯನ್ನು ಹಾಕಿದ್ದಾರೆ.

ಇದೀಗ ಈ ಜಾಗವನ್ನು ಗ್ರಾ.ಪಂ. ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿದ್ದು ಇದರಿಂದ ಇವರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಘನತ್ಯಾಜ್ಯಕ್ಕೆ ಬೇರೆ ಜಾಗ ಗುರುತಿಸುವಂತೆ ವಿನಂತಿಸಿದ ಅವರು ಇದೇ ಸರ್ವೆ ನಂಬರ್‌ನಲ್ಲಿ ಒಟ್ಟು ೭.೭೩ ಎಕ್ರೆ ಸರಕಾರಿ ಜಮೀನು ಇದೆ. ಅದರಲ್ಲಿ ೨ ಎಕ್ರೆ ಸುಶೀಲರು ಕೃಷಿ ಮಾಡಿದರೆ ಉಳಿದ ಜಾಗವೂ ಒತ್ತುವರಿಯಾಗಿದೆ. ಅದೆಲ್ಲವನ್ನು ಬಿಟ್ಟು ಇವರ ಜಾಗ ಮಾತ್ರ ಘನತ್ಯಾಜ್ಯ ವಿಲೇವಾರಿಗೆ ಗುರಿತಿಸಿರುವುದು ಸರಿಯಲ್ಲ. ಇದಕ್ಕೆ ನಾವು ಅವಕಾಶವನ್ನು ನೀಡುವುದಿಲ್ಲ. ಜಿಲ್ಲಾಧಿಕಾರಿ ಸೇರಿದಂತೆ ಹಲವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ಕೆ.ಎಂ.ಬಾಬು ಹೇಳಿದರು.

ಸುಶೀಲಾ ಮಾತನಾಡಿ ಅಕ್ರಮ ಸಕ್ರಮದಡಿಯಲ್ಲಿ ಅರ್ಜಿ ಅಲ್ಲಿಸಲಾಗಿದ್ದು ಕೃಷಿ ಮಾಡಿದ ಆ ಜಾಗವನ್ನು ತನ್ನ ಹೆಸರಿಗೆ ನೀಡಬೇಕೆಂದು ವಿನಂತಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರತ್ನಾವತಿ ಉದ್ದಂತಡ್ಕ, ವಿಶ್ವನಾಥ ಉದ್ದಂತಡ್ಕ, ಸತೀಶ್ ನೆಲ್ಯಡ್ಕ, ರವಿ ಪಿಲಿಕೋಡಿ, ಮಂಜುನಾಥ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

3 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

14 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

16 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

16 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

16 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

17 hours ago