ಫಸಲ್ ಭೀಮಾ ವಿಮಾ ಮೊತ್ತ ಕೂಡಲೇ ರೈತರಿಗೆ ಪಾವತಿಸಿ – ಪ್ರಸನ್ನ ಎಣ್ಮೂರು ಒತ್ತಾಯ

October 18, 2019
8:13 PM

ಸುಳ್ಯ: ಹವಾಮಾನ ಆಧಾರಿತ ಬೆಳೆ ವಿಮೆ ಫಸಲ್ ಭೀಮಾ ಯೋಜನೆಯ ಪರಿಹಾರ ಮೊತ್ತವನ್ನು ರೈತರಿಗೆ ಕೂಡಲೇ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸದಸ್ಯ ಪ್ರಸನ್ನ ಎಣ್ಮೂರು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಾಣಿಜ್ಯ ಬ್ಯಾಂಕ್ ಗಳ ಮೂಲಕ ಫಸಲ್ ಭೀಮಾ ವಿಮೆ ಮಾಡಿಸಿದ ರೈತರಿಗೆ ಪರಿಹಾರ ಮೊತ್ತ ಬಂದಿದೆ. ಆದರೆ ಸಹಕಾರಿ ಸಂಘಗಳ ಮೂಲಕ ವಿಮೆ ಪಾವತಿಸಿದವರಿಗೆ ಬಂದಿಲ್ಲ. ಫಸಲ್ ಭೀಮಾ ವಿಮಾ ಯೋಜನೆ ಪಡೆಯಲು ಕೃಷಿಕರ ಆಯ್ಕೆಗೆ ಬಿಡಬೇಕು. ಅವರಿಗೆ ಆಸಕ್ತಿ ಇರುವ ಬ್ಯಾಂಕ್ ಗಳ ಮೂಲಕ ಪಡೆಯುವಂತಾಗಬೇಕು. ಸಹಕಾರಿ ಸಂಘಗಳು ಒತ್ತಾಯ ಪೂರ್ವಕವಾಗಿ ಫಸಲ್ ಭೀಮಾ ಪ್ರೀಮಿಯಂ ಸಂಗ್ರಹಿಸುವುದು ಸರಿಯಲ್ಲ. ಅಲ್ಲದೆ ಏಕರೂಪ ಹವಾಮಾನ ಆಧಾರಿತ ಡಾಟಾ ಸಿಗದೇ ಇರುವುದು ಕೂಡ ಸಮಸ್ಯೆ ಉಂಟಾಗುತಿದೆ. ಸರಿಯಾಗಿ ಹವಾಮಾನ ವರದಿ ಲಭ್ಯವಾಗಿರುವ ಪ್ರದೇಶದ ಕೃಷಿಕರಿಗೆ ಪರಿಹಾರ ಮೊತ್ತ ದೊರೆತಿದೆ. ಯೋಜನೆಯ ಷರತ್ತು ಪ್ರಕಾರ ಸುಳ್ಯ ತಾಲೂಕಿನ ಹವಾಮಾನ ವೈಪರೀತ್ಯದ ಕಾರಣ ಎಲ್ಲಾ ಕೃಷಿಕರಿಗೂ ಫಸಲ್ ಭೀಮಾ ಹಣ ದೊರೆಯುವ ಅರ್ಹತೆ ಇದೆ. ಆದರೆ ಸರಿಯಾದ ಹವಾಮಾನ ಡಾಟಾ ಅಪ್ ಲೋಡ್ ಆಗದೆ ಇರುವುದು ಕೂಡ ಯೋಜನೆಯ ಸೌಲಭ್ಯ ದೊರೆಯಲು ತಡೆಯಾಗುವ ಸಾಧ್ಯತೆ ಇದೆ ಎಂದರು. ಫಸಲ್ ಭೀಮಾ ಮೊತ್ತ ಕೃಷಿಕರಿಗೆ ದೊರೆಯುವ ತನಕ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸುದರ್ಶನ ಪಾತಿಕಲ್ಲು, ಜಯಪ್ರಕಾಶ್ ಕೂಜುಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror