ಸುದ್ದಿಗಳು

ಫಸಲ್ ಭೀಮಾ ವಿಮಾ ಮೊತ್ತ ಕೂಡಲೇ ರೈತರಿಗೆ ಪಾವತಿಸಿ – ಪ್ರಸನ್ನ ಎಣ್ಮೂರು ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಹವಾಮಾನ ಆಧಾರಿತ ಬೆಳೆ ವಿಮೆ ಫಸಲ್ ಭೀಮಾ ಯೋಜನೆಯ ಪರಿಹಾರ ಮೊತ್ತವನ್ನು ರೈತರಿಗೆ ಕೂಡಲೇ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸದಸ್ಯ ಪ್ರಸನ್ನ ಎಣ್ಮೂರು ಆಗ್ರಹಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಾಣಿಜ್ಯ ಬ್ಯಾಂಕ್ ಗಳ ಮೂಲಕ ಫಸಲ್ ಭೀಮಾ ವಿಮೆ ಮಾಡಿಸಿದ ರೈತರಿಗೆ ಪರಿಹಾರ ಮೊತ್ತ ಬಂದಿದೆ. ಆದರೆ ಸಹಕಾರಿ ಸಂಘಗಳ ಮೂಲಕ ವಿಮೆ ಪಾವತಿಸಿದವರಿಗೆ ಬಂದಿಲ್ಲ. ಫಸಲ್ ಭೀಮಾ ವಿಮಾ ಯೋಜನೆ ಪಡೆಯಲು ಕೃಷಿಕರ ಆಯ್ಕೆಗೆ ಬಿಡಬೇಕು. ಅವರಿಗೆ ಆಸಕ್ತಿ ಇರುವ ಬ್ಯಾಂಕ್ ಗಳ ಮೂಲಕ ಪಡೆಯುವಂತಾಗಬೇಕು. ಸಹಕಾರಿ ಸಂಘಗಳು ಒತ್ತಾಯ ಪೂರ್ವಕವಾಗಿ ಫಸಲ್ ಭೀಮಾ ಪ್ರೀಮಿಯಂ ಸಂಗ್ರಹಿಸುವುದು ಸರಿಯಲ್ಲ. ಅಲ್ಲದೆ ಏಕರೂಪ ಹವಾಮಾನ ಆಧಾರಿತ ಡಾಟಾ ಸಿಗದೇ ಇರುವುದು ಕೂಡ ಸಮಸ್ಯೆ ಉಂಟಾಗುತಿದೆ. ಸರಿಯಾಗಿ ಹವಾಮಾನ ವರದಿ ಲಭ್ಯವಾಗಿರುವ ಪ್ರದೇಶದ ಕೃಷಿಕರಿಗೆ ಪರಿಹಾರ ಮೊತ್ತ ದೊರೆತಿದೆ. ಯೋಜನೆಯ ಷರತ್ತು ಪ್ರಕಾರ ಸುಳ್ಯ ತಾಲೂಕಿನ ಹವಾಮಾನ ವೈಪರೀತ್ಯದ ಕಾರಣ ಎಲ್ಲಾ ಕೃಷಿಕರಿಗೂ ಫಸಲ್ ಭೀಮಾ ಹಣ ದೊರೆಯುವ ಅರ್ಹತೆ ಇದೆ. ಆದರೆ ಸರಿಯಾದ ಹವಾಮಾನ ಡಾಟಾ ಅಪ್ ಲೋಡ್ ಆಗದೆ ಇರುವುದು ಕೂಡ ಯೋಜನೆಯ ಸೌಲಭ್ಯ ದೊರೆಯಲು ತಡೆಯಾಗುವ ಸಾಧ್ಯತೆ ಇದೆ ಎಂದರು. ಫಸಲ್ ಭೀಮಾ ಮೊತ್ತ ಕೃಷಿಕರಿಗೆ ದೊರೆಯುವ ತನಕ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸುದರ್ಶನ ಪಾತಿಕಲ್ಲು, ಜಯಪ್ರಕಾಶ್ ಕೂಜುಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

14 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

14 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

15 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

15 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

15 hours ago