ಸುಳ್ಯ: ಹವಾಮಾನ ಆಧಾರಿತ ಬೆಳೆ ವಿಮೆ ಫಸಲ್ ಭೀಮಾ ಯೋಜನೆಯ ಪರಿಹಾರ ಮೊತ್ತವನ್ನು ರೈತರಿಗೆ ಕೂಡಲೇ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸದಸ್ಯ ಪ್ರಸನ್ನ ಎಣ್ಮೂರು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಾಣಿಜ್ಯ ಬ್ಯಾಂಕ್ ಗಳ ಮೂಲಕ ಫಸಲ್ ಭೀಮಾ ವಿಮೆ ಮಾಡಿಸಿದ ರೈತರಿಗೆ ಪರಿಹಾರ ಮೊತ್ತ ಬಂದಿದೆ. ಆದರೆ ಸಹಕಾರಿ ಸಂಘಗಳ ಮೂಲಕ ವಿಮೆ ಪಾವತಿಸಿದವರಿಗೆ ಬಂದಿಲ್ಲ. ಫಸಲ್ ಭೀಮಾ ವಿಮಾ ಯೋಜನೆ ಪಡೆಯಲು ಕೃಷಿಕರ ಆಯ್ಕೆಗೆ ಬಿಡಬೇಕು. ಅವರಿಗೆ ಆಸಕ್ತಿ ಇರುವ ಬ್ಯಾಂಕ್ ಗಳ ಮೂಲಕ ಪಡೆಯುವಂತಾಗಬೇಕು. ಸಹಕಾರಿ ಸಂಘಗಳು ಒತ್ತಾಯ ಪೂರ್ವಕವಾಗಿ ಫಸಲ್ ಭೀಮಾ ಪ್ರೀಮಿಯಂ ಸಂಗ್ರಹಿಸುವುದು ಸರಿಯಲ್ಲ. ಅಲ್ಲದೆ ಏಕರೂಪ ಹವಾಮಾನ ಆಧಾರಿತ ಡಾಟಾ ಸಿಗದೇ ಇರುವುದು ಕೂಡ ಸಮಸ್ಯೆ ಉಂಟಾಗುತಿದೆ. ಸರಿಯಾಗಿ ಹವಾಮಾನ ವರದಿ ಲಭ್ಯವಾಗಿರುವ ಪ್ರದೇಶದ ಕೃಷಿಕರಿಗೆ ಪರಿಹಾರ ಮೊತ್ತ ದೊರೆತಿದೆ. ಯೋಜನೆಯ ಷರತ್ತು ಪ್ರಕಾರ ಸುಳ್ಯ ತಾಲೂಕಿನ ಹವಾಮಾನ ವೈಪರೀತ್ಯದ ಕಾರಣ ಎಲ್ಲಾ ಕೃಷಿಕರಿಗೂ ಫಸಲ್ ಭೀಮಾ ಹಣ ದೊರೆಯುವ ಅರ್ಹತೆ ಇದೆ. ಆದರೆ ಸರಿಯಾದ ಹವಾಮಾನ ಡಾಟಾ ಅಪ್ ಲೋಡ್ ಆಗದೆ ಇರುವುದು ಕೂಡ ಯೋಜನೆಯ ಸೌಲಭ್ಯ ದೊರೆಯಲು ತಡೆಯಾಗುವ ಸಾಧ್ಯತೆ ಇದೆ ಎಂದರು. ಫಸಲ್ ಭೀಮಾ ಮೊತ್ತ ಕೃಷಿಕರಿಗೆ ದೊರೆಯುವ ತನಕ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸುದರ್ಶನ ಪಾತಿಕಲ್ಲು, ಜಯಪ್ರಕಾಶ್ ಕೂಜುಗೋಡು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…