Advertisement
ಸುದ್ದಿಗಳು

ಫಸಲ್ ಭೀಮಾ ವಿಮಾ ಮೊತ್ತ ಕೂಡಲೇ ರೈತರಿಗೆ ಪಾವತಿಸಿ – ಪ್ರಸನ್ನ ಎಣ್ಮೂರು ಒತ್ತಾಯ

Share

ಸುಳ್ಯ: ಹವಾಮಾನ ಆಧಾರಿತ ಬೆಳೆ ವಿಮೆ ಫಸಲ್ ಭೀಮಾ ಯೋಜನೆಯ ಪರಿಹಾರ ಮೊತ್ತವನ್ನು ರೈತರಿಗೆ ಕೂಡಲೇ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸದಸ್ಯ ಪ್ರಸನ್ನ ಎಣ್ಮೂರು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಾಣಿಜ್ಯ ಬ್ಯಾಂಕ್ ಗಳ ಮೂಲಕ ಫಸಲ್ ಭೀಮಾ ವಿಮೆ ಮಾಡಿಸಿದ ರೈತರಿಗೆ ಪರಿಹಾರ ಮೊತ್ತ ಬಂದಿದೆ. ಆದರೆ ಸಹಕಾರಿ ಸಂಘಗಳ ಮೂಲಕ ವಿಮೆ ಪಾವತಿಸಿದವರಿಗೆ ಬಂದಿಲ್ಲ. ಫಸಲ್ ಭೀಮಾ ವಿಮಾ ಯೋಜನೆ ಪಡೆಯಲು ಕೃಷಿಕರ ಆಯ್ಕೆಗೆ ಬಿಡಬೇಕು. ಅವರಿಗೆ ಆಸಕ್ತಿ ಇರುವ ಬ್ಯಾಂಕ್ ಗಳ ಮೂಲಕ ಪಡೆಯುವಂತಾಗಬೇಕು. ಸಹಕಾರಿ ಸಂಘಗಳು ಒತ್ತಾಯ ಪೂರ್ವಕವಾಗಿ ಫಸಲ್ ಭೀಮಾ ಪ್ರೀಮಿಯಂ ಸಂಗ್ರಹಿಸುವುದು ಸರಿಯಲ್ಲ. ಅಲ್ಲದೆ ಏಕರೂಪ ಹವಾಮಾನ ಆಧಾರಿತ ಡಾಟಾ ಸಿಗದೇ ಇರುವುದು ಕೂಡ ಸಮಸ್ಯೆ ಉಂಟಾಗುತಿದೆ. ಸರಿಯಾಗಿ ಹವಾಮಾನ ವರದಿ ಲಭ್ಯವಾಗಿರುವ ಪ್ರದೇಶದ ಕೃಷಿಕರಿಗೆ ಪರಿಹಾರ ಮೊತ್ತ ದೊರೆತಿದೆ. ಯೋಜನೆಯ ಷರತ್ತು ಪ್ರಕಾರ ಸುಳ್ಯ ತಾಲೂಕಿನ ಹವಾಮಾನ ವೈಪರೀತ್ಯದ ಕಾರಣ ಎಲ್ಲಾ ಕೃಷಿಕರಿಗೂ ಫಸಲ್ ಭೀಮಾ ಹಣ ದೊರೆಯುವ ಅರ್ಹತೆ ಇದೆ. ಆದರೆ ಸರಿಯಾದ ಹವಾಮಾನ ಡಾಟಾ ಅಪ್ ಲೋಡ್ ಆಗದೆ ಇರುವುದು ಕೂಡ ಯೋಜನೆಯ ಸೌಲಭ್ಯ ದೊರೆಯಲು ತಡೆಯಾಗುವ ಸಾಧ್ಯತೆ ಇದೆ ಎಂದರು. ಫಸಲ್ ಭೀಮಾ ಮೊತ್ತ ಕೃಷಿಕರಿಗೆ ದೊರೆಯುವ ತನಕ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸುದರ್ಶನ ಪಾತಿಕಲ್ಲು, ಜಯಪ್ರಕಾಶ್ ಕೂಜುಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

7 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

8 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

8 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

14 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

16 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

16 hours ago