ಗುತ್ತಿಗಾರು: ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆದ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕುಟುಂಬದ ಸದಸ್ಯನ ಆರೋಗ್ಯ ವಿಚಾರಿಸಲು ಹೋದ ಗುತ್ತಿಗಾರು ಗ್ರಾಮದ ಕಮಿಲ ಕುಟುಂಬವೊಂದರ ಸದಸ್ಯರನ್ನು ಹೋಂ ಕ್ವಾರಂಟೇನ್ ಗೆ ಗುತ್ತಿಗಾರು ಗ್ರಾ ಪಂ ಪಿಡಿಒ ಹಾಗೂ ಆಡಳಿತವು ತಿಳಿಸಿದೆ.
ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಮೂಲದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ವ್ಯಕ್ತಿಯೋರ್ವರು ಚಿಕಿತ್ಸೆ ಪಡೆದು ಬಂದಿದ್ದರು. ಇವರನ್ನು ಗುತ್ತಿಗಾರು ಗ್ರಾಮದ ಕಮಿಲದ ಸಂಬಂಧಿ ಕುಟುಂಬ ಮಾತನಾಡಿಸಲು ಹೋಗಿತ್ತು. ಈ ಸಂಗತಿ ಆರೋಗ್ಯ ಇಲಾಖೆ ಗಮನಕ್ಕೆ ಬಂದ ತಕ್ಷಣವೇ ಕ್ವಾರಂಟೇನ್ ನಲ್ಲಿರಲು ಸೂಚಿಸಲಾಗಿದೆ. ಮನೆಯಿಂದ ಹೊರಬಾರದಂತೆ ಸೂಚಿಸಲಾಗಿದೆ. ಗ್ರಾಪಂ ಆಡಳಿತವು ಮನೆಗೆ ಭೇಟಿ ನೀಡಿದೆ.
ಇದೇ ಸಂದರ್ಭ ಗುತ್ತಿಗಾರು ಮೆಸ್ಕಾಂ ವಿಭಾಗದಲ್ಲಿ ಲೈನ್ ಮೇನ್ ಆಗಿದ್ದ ವ್ಯಕ್ತಿ ಬೆಳಗಾಂನಿಂದ ವಾಪಾಸು ಬಂದಿದ್ದರು. ಅವರನ್ನು ಕೂಡಾ 14 ದಿನಗಳ ಕ್ವಾರಂಟೇನ್ ಗೆ ಸೂಚಿಸಲಾಗಿದೆ.
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…