ಗುತ್ತಿಗಾರು: ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆದ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕುಟುಂಬದ ಸದಸ್ಯನ ಆರೋಗ್ಯ ವಿಚಾರಿಸಲು ಹೋದ ಗುತ್ತಿಗಾರು ಗ್ರಾಮದ ಕಮಿಲ ಕುಟುಂಬವೊಂದರ ಸದಸ್ಯರನ್ನು ಹೋಂ ಕ್ವಾರಂಟೇನ್ ಗೆ ಗುತ್ತಿಗಾರು ಗ್ರಾ ಪಂ ಪಿಡಿಒ ಹಾಗೂ ಆಡಳಿತವು ತಿಳಿಸಿದೆ.
ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಮೂಲದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ವ್ಯಕ್ತಿಯೋರ್ವರು ಚಿಕಿತ್ಸೆ ಪಡೆದು ಬಂದಿದ್ದರು. ಇವರನ್ನು ಗುತ್ತಿಗಾರು ಗ್ರಾಮದ ಕಮಿಲದ ಸಂಬಂಧಿ ಕುಟುಂಬ ಮಾತನಾಡಿಸಲು ಹೋಗಿತ್ತು. ಈ ಸಂಗತಿ ಆರೋಗ್ಯ ಇಲಾಖೆ ಗಮನಕ್ಕೆ ಬಂದ ತಕ್ಷಣವೇ ಕ್ವಾರಂಟೇನ್ ನಲ್ಲಿರಲು ಸೂಚಿಸಲಾಗಿದೆ. ಮನೆಯಿಂದ ಹೊರಬಾರದಂತೆ ಸೂಚಿಸಲಾಗಿದೆ. ಗ್ರಾಪಂ ಆಡಳಿತವು ಮನೆಗೆ ಭೇಟಿ ನೀಡಿದೆ.
ಇದೇ ಸಂದರ್ಭ ಗುತ್ತಿಗಾರು ಮೆಸ್ಕಾಂ ವಿಭಾಗದಲ್ಲಿ ಲೈನ್ ಮೇನ್ ಆಗಿದ್ದ ವ್ಯಕ್ತಿ ಬೆಳಗಾಂನಿಂದ ವಾಪಾಸು ಬಂದಿದ್ದರು. ಅವರನ್ನು ಕೂಡಾ 14 ದಿನಗಳ ಕ್ವಾರಂಟೇನ್ ಗೆ ಸೂಚಿಸಲಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…