ಗುತ್ತಿಗಾರು: ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆದ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಕುಟುಂಬದ ಸದಸ್ಯನ ಆರೋಗ್ಯ ವಿಚಾರಿಸಲು ಹೋದ ಗುತ್ತಿಗಾರು ಗ್ರಾಮದ ಕಮಿಲ ಕುಟುಂಬವೊಂದರ ಸದಸ್ಯರನ್ನು ಹೋಂ ಕ್ವಾರಂಟೇನ್ ಗೆ ಗುತ್ತಿಗಾರು ಗ್ರಾ ಪಂ ಪಿಡಿಒ ಹಾಗೂ ಆಡಳಿತವು ತಿಳಿಸಿದೆ.
ಮಂಗಳೂರಿನ ಫಸ್ಟ್ ನ್ಯೂರೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಮೂಲದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ವ್ಯಕ್ತಿಯೋರ್ವರು ಚಿಕಿತ್ಸೆ ಪಡೆದು ಬಂದಿದ್ದರು. ಇವರನ್ನು ಗುತ್ತಿಗಾರು ಗ್ರಾಮದ ಕಮಿಲದ ಸಂಬಂಧಿ ಕುಟುಂಬ ಮಾತನಾಡಿಸಲು ಹೋಗಿತ್ತು. ಈ ಸಂಗತಿ ಆರೋಗ್ಯ ಇಲಾಖೆ ಗಮನಕ್ಕೆ ಬಂದ ತಕ್ಷಣವೇ ಕ್ವಾರಂಟೇನ್ ನಲ್ಲಿರಲು ಸೂಚಿಸಲಾಗಿದೆ. ಮನೆಯಿಂದ ಹೊರಬಾರದಂತೆ ಸೂಚಿಸಲಾಗಿದೆ. ಗ್ರಾಪಂ ಆಡಳಿತವು ಮನೆಗೆ ಭೇಟಿ ನೀಡಿದೆ.
ಇದೇ ಸಂದರ್ಭ ಗುತ್ತಿಗಾರು ಮೆಸ್ಕಾಂ ವಿಭಾಗದಲ್ಲಿ ಲೈನ್ ಮೇನ್ ಆಗಿದ್ದ ವ್ಯಕ್ತಿ ಬೆಳಗಾಂನಿಂದ ವಾಪಾಸು ಬಂದಿದ್ದರು. ಅವರನ್ನು ಕೂಡಾ 14 ದಿನಗಳ ಕ್ವಾರಂಟೇನ್ ಗೆ ಸೂಚಿಸಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…