ಸುಳ್ಯ: ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೌರತ್ವ ತಿದ್ದುಪಡಿ ಕಾಯಿದೆ ಹಾಗು ರಾಷ್ಟ್ರೀಯ ಪೌರತ್ವ ನೋಂದಾವಣೆ ಕುರಿತು ಮಾಹಿತಿ ಶಿಬಿರವನ್ನು ಮಂಗಳೂರು ಕುಲಶೇಖರ ಕುರ್ಡೆಲ್ ಚರ್ಚ್ ಸಭಾಂಗಣದಲ್ಲಿ ಫೆ.6 ರಂದು ಹಮ್ಮಿಕೊಳ್ಳಲಾಗಿದೆ. ಪ್ರತಿ ಬ್ಲಾಕ್ ನಿಂದ 100 ಮಂದಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಬಿರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಮೇಶ್ ಕುಮಾರ್, ಬಿ.ಎಲ್ ಶಂಕರ್ ,ಭವ್ಯ ನರಸಿಂಹ ಮೂರ್ತಿ ಮಾಹಿತಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10.30 ರಿಂದ 1.30ರ ತನಕ ಕಾರ್ಯಾಗಾರ ನಡೆಯಲಿದ್ದು
ಪೌರತ್ವ ತಿದ್ದುಪಡಿ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಾಗಾರ ನಡೆಸಿ ಜನರಿಗೆ ಕಾಯಿದೆಯಲ್ಲಿನ ವಾಸ್ತವಾಂಶವನ್ನು ತಿಳಿಸಲಾಗುವುದು. ದೇಶದ ಕಾನೂನು, ಕಾಯಿದೆಗಳು ಮತ ಪಡೆಯುವ ದೃಷ್ಟಿಯಿಂದ ಆಗಬಾರದು ಮತ್ತು ಧಾರ್ಮಿಕ ನೆಲೆಯ ಆಧಾರದಲ್ಲಿ ರೂಪಿತವಾಗಬಾರದು. ಹಾಗಾದರೆ ಅದು ದೇಶದ ಭವಿಷ್ಯಕ್ಕೆ ಅಪಾಯಕಾರಿ. ಈ ರೀತಿಯ ಬೆಳವಣಿಗೆಯಿಂದ ದೇಶದಲ್ಲಿ ಸಂಘರ್ಷಕ್ಕೆ ಕಾರಣವಾಗಬಹುದು. ಆದುದರಿಂದ ಕಾಯಿದೆಗಳು ದೇಶದ ಭವಿಷ್ಯಕ್ಕೆ ಮತ್ತು ಜನರ ಭಾವನೆಗಳಿಗೆ ಪೂರಕವಾಗಿರಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್.ಗಂಗಾಧರ, ನಂದರಾಜ ಸಂಕೇಶ, ಪರಮೇಶ್ವರ ಕೆಂಬಾರೆ, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…