Advertisement
ಸುದ್ದಿಗಳು

ಫೆ‌.6 :ಕಾಂಗ್ರೆಸ್ ವತಿಯಿಂದ ಸಿಎಎ ಮತ್ತು ಎನ್ಆರ್ ಸಿ ಕುರಿತು ಮಾಹಿತಿ ಕಾರ್ಯಾಗಾರ

Share

ಸುಳ್ಯ: ದ.ಕ‌.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೌರತ್ವ ತಿದ್ದುಪಡಿ ಕಾಯಿದೆ ಹಾಗು ರಾಷ್ಟ್ರೀಯ ಪೌರತ್ವ ನೋಂದಾವಣೆ ಕುರಿತು ಮಾಹಿತಿ ಶಿಬಿರವನ್ನು ಮಂಗಳೂರು ಕುಲಶೇಖರ ಕುರ್ಡೆಲ್ ಚರ್ಚ್ ಸಭಾಂಗಣದಲ್ಲಿ ಫೆ.6 ರಂದು ಹಮ್ಮಿಕೊಳ್ಳಲಾಗಿದೆ. ಪ್ರತಿ ಬ್ಲಾಕ್ ನಿಂದ 100 ಮಂದಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಬಿರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಮೇಶ್ ಕುಮಾರ್, ಬಿ.ಎಲ್ ಶಂಕರ್ ,ಭವ್ಯ ನರಸಿಂಹ ಮೂರ್ತಿ ಮಾಹಿತಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10.30 ರಿಂದ 1.30ರ ತನಕ ಕಾರ್ಯಾಗಾರ ನಡೆಯಲಿದ್ದು
ಪೌರತ್ವ ತಿದ್ದುಪಡಿ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಾಗಾರ ನಡೆಸಿ ಜನರಿಗೆ ಕಾಯಿದೆಯಲ್ಲಿನ ವಾಸ್ತವಾಂಶವನ್ನು ತಿಳಿಸಲಾಗುವುದು. ದೇಶದ ಕಾನೂನು, ಕಾಯಿದೆಗಳು ಮತ ಪಡೆಯುವ ದೃಷ್ಟಿಯಿಂದ ಆಗಬಾರದು ಮತ್ತು ಧಾರ್ಮಿಕ ನೆಲೆಯ ಆಧಾರದಲ್ಲಿ ರೂಪಿತವಾಗಬಾರದು. ಹಾಗಾದರೆ ಅದು ದೇಶದ ಭವಿಷ್ಯಕ್ಕೆ ಅಪಾಯಕಾರಿ. ಈ ರೀತಿಯ ಬೆಳವಣಿಗೆಯಿಂದ ದೇಶದಲ್ಲಿ ಸಂಘರ್ಷಕ್ಕೆ ಕಾರಣವಾಗಬಹುದು. ಆದುದರಿಂದ ಕಾಯಿದೆಗಳು ದೇಶದ ಭವಿಷ್ಯಕ್ಕೆ ಮತ್ತು ಜನರ ಭಾವನೆಗಳಿಗೆ ಪೂರಕವಾಗಿರಬೇಕು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್‌.ಗಂಗಾಧರ, ನಂದರಾಜ ಸಂಕೇಶ, ಪರಮೇಶ್ವರ ಕೆಂಬಾರೆ, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

4 hours ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

5 hours ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

5 hours ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

5 hours ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

14 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

18 hours ago