ಸುಳ್ಯ: ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೌರತ್ವ ತಿದ್ದುಪಡಿ ಕಾಯಿದೆ ಹಾಗು ರಾಷ್ಟ್ರೀಯ ಪೌರತ್ವ ನೋಂದಾವಣೆ ಕುರಿತು ಮಾಹಿತಿ ಶಿಬಿರವನ್ನು ಮಂಗಳೂರು ಕುಲಶೇಖರ ಕುರ್ಡೆಲ್ ಚರ್ಚ್ ಸಭಾಂಗಣದಲ್ಲಿ ಫೆ.6 ರಂದು ಹಮ್ಮಿಕೊಳ್ಳಲಾಗಿದೆ. ಪ್ರತಿ ಬ್ಲಾಕ್ ನಿಂದ 100 ಮಂದಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಬಿರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಮೇಶ್ ಕುಮಾರ್, ಬಿ.ಎಲ್ ಶಂಕರ್ ,ಭವ್ಯ ನರಸಿಂಹ ಮೂರ್ತಿ ಮಾಹಿತಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10.30 ರಿಂದ 1.30ರ ತನಕ ಕಾರ್ಯಾಗಾರ ನಡೆಯಲಿದ್ದು
ಪೌರತ್ವ ತಿದ್ದುಪಡಿ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಾಗಾರ ನಡೆಸಿ ಜನರಿಗೆ ಕಾಯಿದೆಯಲ್ಲಿನ ವಾಸ್ತವಾಂಶವನ್ನು ತಿಳಿಸಲಾಗುವುದು. ದೇಶದ ಕಾನೂನು, ಕಾಯಿದೆಗಳು ಮತ ಪಡೆಯುವ ದೃಷ್ಟಿಯಿಂದ ಆಗಬಾರದು ಮತ್ತು ಧಾರ್ಮಿಕ ನೆಲೆಯ ಆಧಾರದಲ್ಲಿ ರೂಪಿತವಾಗಬಾರದು. ಹಾಗಾದರೆ ಅದು ದೇಶದ ಭವಿಷ್ಯಕ್ಕೆ ಅಪಾಯಕಾರಿ. ಈ ರೀತಿಯ ಬೆಳವಣಿಗೆಯಿಂದ ದೇಶದಲ್ಲಿ ಸಂಘರ್ಷಕ್ಕೆ ಕಾರಣವಾಗಬಹುದು. ಆದುದರಿಂದ ಕಾಯಿದೆಗಳು ದೇಶದ ಭವಿಷ್ಯಕ್ಕೆ ಮತ್ತು ಜನರ ಭಾವನೆಗಳಿಗೆ ಪೂರಕವಾಗಿರಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್.ಗಂಗಾಧರ, ನಂದರಾಜ ಸಂಕೇಶ, ಪರಮೇಶ್ವರ ಕೆಂಬಾರೆ, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…