ಸುಳ್ಯ: ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೌರತ್ವ ತಿದ್ದುಪಡಿ ಕಾಯಿದೆ ಹಾಗು ರಾಷ್ಟ್ರೀಯ ಪೌರತ್ವ ನೋಂದಾವಣೆ ಕುರಿತು ಮಾಹಿತಿ ಶಿಬಿರವನ್ನು ಮಂಗಳೂರು ಕುಲಶೇಖರ ಕುರ್ಡೆಲ್ ಚರ್ಚ್ ಸಭಾಂಗಣದಲ್ಲಿ ಫೆ.6 ರಂದು ಹಮ್ಮಿಕೊಳ್ಳಲಾಗಿದೆ. ಪ್ರತಿ ಬ್ಲಾಕ್ ನಿಂದ 100 ಮಂದಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿಬಿರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಮೇಶ್ ಕುಮಾರ್, ಬಿ.ಎಲ್ ಶಂಕರ್ ,ಭವ್ಯ ನರಸಿಂಹ ಮೂರ್ತಿ ಮಾಹಿತಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10.30 ರಿಂದ 1.30ರ ತನಕ ಕಾರ್ಯಾಗಾರ ನಡೆಯಲಿದ್ದು
ಪೌರತ್ವ ತಿದ್ದುಪಡಿ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಸಮಗ್ರ ಮಾಹಿತಿ ನೀಡಲಿದ್ದಾರೆ. ಬಳಿಕ ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಾಗಾರ ನಡೆಸಿ ಜನರಿಗೆ ಕಾಯಿದೆಯಲ್ಲಿನ ವಾಸ್ತವಾಂಶವನ್ನು ತಿಳಿಸಲಾಗುವುದು. ದೇಶದ ಕಾನೂನು, ಕಾಯಿದೆಗಳು ಮತ ಪಡೆಯುವ ದೃಷ್ಟಿಯಿಂದ ಆಗಬಾರದು ಮತ್ತು ಧಾರ್ಮಿಕ ನೆಲೆಯ ಆಧಾರದಲ್ಲಿ ರೂಪಿತವಾಗಬಾರದು. ಹಾಗಾದರೆ ಅದು ದೇಶದ ಭವಿಷ್ಯಕ್ಕೆ ಅಪಾಯಕಾರಿ. ಈ ರೀತಿಯ ಬೆಳವಣಿಗೆಯಿಂದ ದೇಶದಲ್ಲಿ ಸಂಘರ್ಷಕ್ಕೆ ಕಾರಣವಾಗಬಹುದು. ಆದುದರಿಂದ ಕಾಯಿದೆಗಳು ದೇಶದ ಭವಿಷ್ಯಕ್ಕೆ ಮತ್ತು ಜನರ ಭಾವನೆಗಳಿಗೆ ಪೂರಕವಾಗಿರಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ.ಎಸ್.ಗಂಗಾಧರ, ನಂದರಾಜ ಸಂಕೇಶ, ಪರಮೇಶ್ವರ ಕೆಂಬಾರೆ, ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…