ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.
ಫೆ.2 ರಂದು ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…