Advertisement
ಧಾರ್ಮಿಕ

ಫೆ.1 ರಿಂದ ವಳಲಂಬೆ ಜಾತ್ರೋತ್ಸವ : ಗೊನೆ ಮುಹೂರ್ತ

Share

ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ  ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.

ಫೆ.2 ರಂದು  ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

6 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

24 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago