ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.
ಫೆ.2 ರಂದು ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…