ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.
Advertisementಫೆ.2 ರಂದು ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…