ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.
ಫೆ.2 ರಂದು ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…