Advertisement
ಧಾರ್ಮಿಕ

ಫೆ.1 ರಿಂದ ವಳಲಂಬೆ ಜಾತ್ರೋತ್ಸವ : ಗೊನೆ ಮುಹೂರ್ತ

Share

ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ  ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.

ಫೆ.2 ರಂದು  ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

4 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

11 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

19 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

20 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago