ಗುತ್ತಿಗಾರು: ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮ ಫೆ.1 ಹಾಗೂ 2 ರಂದು ನಡೆಯಲಿದೆ. ಈ ಪ್ರಯುಕ್ತ ಶನಿವಾರ ಗೊನೆ ಮುಹೂರ್ತ ನಡೆಯಿತು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾನಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ಕೇಶವ ಹೊಸೋಳಿಕೆ , ಬಿಕೆ ಬೆಳ್ಯಪ್ಪ ಕಡ್ತಲ್ ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ವಳಲಂಬೆ, ಅರ್ಚಕ ಮಹಾಬಲೇಶ್ವರ ಭಟ್, ವ್ಯವಸ್ಥಾನಪನಾ ಸಮಿತಿ ಮಾಜಿ ಸದಸ್ಯರುಗಳು, ಭಕ್ತಾದಿಗಳು, ಜಾತ್ರೋತ್ಸವ ಸಮಿತಿ ಹಾಗೂ ಸೇವಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಫೆ.1 ರಂದು ನೀಲೇಶ್ವರ ದಾಮೋದರ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಉತ್ಸವಾದಿಗಳು ನಡೆಯಲಿದೆ. ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ಸಂಜೆ ದೇವರ ಉತ್ಸವ ಬಲಿ , ವಸಂತಕಟ್ಟೆ ಪೂಜೆ, ಬಟ್ಟಲು ಕಾಣಿಕೆ ನಡೆಯಲಿದೆ.
Advertisementಫೆ.2 ರಂದು ದೈವಗಳ ನೇಮ ನಡೆಯಲಿದೆ. ಬೆಳಗ್ಗೆ ಉಳ್ಳಾಕ್ಲು-ಉಳ್ಳಾಲ್ತಿ ದೈವಗಳ ನೇಮ, ಕುಮಾರ ದೈವದ ನೇಮ ನಡೆದು ಬಳಿಕ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ ಹಾಗೂ ಸಂಜೆ ಗುಳಿಗ ಕೋಲ ನಡೆಯಲಿದೆ.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…