Advertisement
ಸುದ್ದಿಗಳು

ಫೆ.22 ರಿಂದ 25 ರವರೆಗೆ ಕರ್ನಾಟಕ ಕುಸ್ತಿ ಹಬ್ಬ

Share

ಮಂಗಳೂರು : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ರಾಜ್ಯ ಭಾರತೀಯ ಶೈಲಿಯ ಕುಸ್ತಿ ಸಂಘದ ಸಹಯೋಗದಲ್ಲಿ ಫೆಬ್ರವರಿ 22 ರಿಂದ 25 ರವರೆಗೆ 4 ದಿನಗಳ ಕಾಲ ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಹಮ್ಮಿಕೊಂಡಿದೆ.

Advertisement
Advertisement

ದೇಶದ ಹೆಸರಾಂತ ಸುಮಾರು 1200 ಕ್ಕೂ ಹೆಚ್ಚು ಕುಸ್ತಿಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವಿವಿಧ 3 ಅಖಾಡಗಳಲ್ಲಿ 30 ಪ್ರತ್ಯೇಕ ತೂಕಗಳ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. 80 ಲಕ್ಷ ರೂ. ಮೌಲ್ಯದ ನಗದು ಬಹುಮಾನ, ಪಾರಿತೋಷಕಗಳನ್ನು ನೀಡಲಾಗುವುದು. ಅಜರ್‍ಬೈಜಾನ್, ಜಾರ್ಜಿಯಾ, ಇರಾನ್ ದೇಶಗಳ ಕುಸ್ತಿಪಟುಗಳ ಜೊತೆಗೆ ಭಾರತದ ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಒಲಂಪಿಕ್ ಪಂದ್ಯ ವಿಜೇತ್, ಯೋಗೇಶ್ವರ ದತ್, ಪದ್ಮಶ್ರೀ, ಅರ್ಜುನ್ ಪ್ರಶಸ್ತಿ ವಿಜೇತರು ಹಾಗೂ ನಿವೃತ್ತ ಐಜಿಪಿ ಕರ್ತಾರ ಸಿಂಗ್, ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ ಒಲಂಪಿಕ್ ಪದಕ ವಿಜೇತ ಸಾಕ್ಷಿ ಮಲಿಕ್, ಅಂತರಾಷ್ಟ್ರೀಯ ಕುಸ್ತಿಪಟು ಮಹ್ಮದ ಮುರಾಡಿ, ಭಾರತ ಕೇಸರಿ ಉಮೇಶ ಚೌದರಿ, ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಾದ ಅಂಶು ಮಲ್ಲಿಕ್, ಜೈಲಾ ನಾಗೀಜಡೆ, ನೈನಾ, ಸಭೀರಾ ಅಲಿಯೆವಾ ಅಲಹವರ್ಡಿ ಮೊದಲಾದ ಹೆಸರಾಮತ ಕುಸ್ತಿ ಪಟುಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ.

Advertisement

ನೋಂದಣಿ: ಫೆಬ್ರವರಿ 22 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಕುಸ್ತಿಪಟುಗಳ ದೇಹ ತೂಕವನ್ನು ತೆಗೆದುಕೊಳ್ಳಲಾಗುವುದು. ವಯೋಮಿತಿಯಲ್ಲಿ ಭಾಗವಹಿಸುವ ಕುಸ್ತಿಪಟುಗಳು ಜನನ ನೋಂದಣಿ ಅಧಿಕಾರಿಗಳಿಂದ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಹಾಗೂ ಬ್ಯಾಂಕ್ ಖಾತೆಯ ಪ್ರತಿಯನ್ನು ತರಬೇಕು.

ಸಾರಿಗೆ ವ್ಯವಸ್ಥೆ: ಫೆಬ್ರವರಿ 22 ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ವರೆಗೆ ಧಾರವಾಡದ ಕೇಂದ್ರಿಯ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಕರ್ನಾಟಕ ಕಾಲೇಜು ಮೈದಾನದವರೆಗೆ ಕುಸ್ತಿಪಟುಗಳ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ 94485 90935, 9964245769, 7892042714, 9481966245 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

17 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

18 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

18 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

18 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

20 hours ago