Advertisement
ಸುದ್ದಿಗಳು

ಫೆ.22 ರಿಂದ 25 ರವರೆಗೆ ಕರ್ನಾಟಕ ಕುಸ್ತಿ ಹಬ್ಬ

Share

ಮಂಗಳೂರು : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ರಾಜ್ಯ ಭಾರತೀಯ ಶೈಲಿಯ ಕುಸ್ತಿ ಸಂಘದ ಸಹಯೋಗದಲ್ಲಿ ಫೆಬ್ರವರಿ 22 ರಿಂದ 25 ರವರೆಗೆ 4 ದಿನಗಳ ಕಾಲ ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಹಮ್ಮಿಕೊಂಡಿದೆ.

ದೇಶದ ಹೆಸರಾಂತ ಸುಮಾರು 1200 ಕ್ಕೂ ಹೆಚ್ಚು ಕುಸ್ತಿಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವಿವಿಧ 3 ಅಖಾಡಗಳಲ್ಲಿ 30 ಪ್ರತ್ಯೇಕ ತೂಕಗಳ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. 80 ಲಕ್ಷ ರೂ. ಮೌಲ್ಯದ ನಗದು ಬಹುಮಾನ, ಪಾರಿತೋಷಕಗಳನ್ನು ನೀಡಲಾಗುವುದು. ಅಜರ್‍ಬೈಜಾನ್, ಜಾರ್ಜಿಯಾ, ಇರಾನ್ ದೇಶಗಳ ಕುಸ್ತಿಪಟುಗಳ ಜೊತೆಗೆ ಭಾರತದ ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಒಲಂಪಿಕ್ ಪಂದ್ಯ ವಿಜೇತ್, ಯೋಗೇಶ್ವರ ದತ್, ಪದ್ಮಶ್ರೀ, ಅರ್ಜುನ್ ಪ್ರಶಸ್ತಿ ವಿಜೇತರು ಹಾಗೂ ನಿವೃತ್ತ ಐಜಿಪಿ ಕರ್ತಾರ ಸಿಂಗ್, ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ ಒಲಂಪಿಕ್ ಪದಕ ವಿಜೇತ ಸಾಕ್ಷಿ ಮಲಿಕ್, ಅಂತರಾಷ್ಟ್ರೀಯ ಕುಸ್ತಿಪಟು ಮಹ್ಮದ ಮುರಾಡಿ, ಭಾರತ ಕೇಸರಿ ಉಮೇಶ ಚೌದರಿ, ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಾದ ಅಂಶು ಮಲ್ಲಿಕ್, ಜೈಲಾ ನಾಗೀಜಡೆ, ನೈನಾ, ಸಭೀರಾ ಅಲಿಯೆವಾ ಅಲಹವರ್ಡಿ ಮೊದಲಾದ ಹೆಸರಾಮತ ಕುಸ್ತಿ ಪಟುಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ.

ನೋಂದಣಿ: ಫೆಬ್ರವರಿ 22 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಕುಸ್ತಿಪಟುಗಳ ದೇಹ ತೂಕವನ್ನು ತೆಗೆದುಕೊಳ್ಳಲಾಗುವುದು. ವಯೋಮಿತಿಯಲ್ಲಿ ಭಾಗವಹಿಸುವ ಕುಸ್ತಿಪಟುಗಳು ಜನನ ನೋಂದಣಿ ಅಧಿಕಾರಿಗಳಿಂದ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಹಾಗೂ ಬ್ಯಾಂಕ್ ಖಾತೆಯ ಪ್ರತಿಯನ್ನು ತರಬೇಕು.

ಸಾರಿಗೆ ವ್ಯವಸ್ಥೆ: ಫೆಬ್ರವರಿ 22 ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ವರೆಗೆ ಧಾರವಾಡದ ಕೇಂದ್ರಿಯ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಕರ್ನಾಟಕ ಕಾಲೇಜು ಮೈದಾನದವರೆಗೆ ಕುಸ್ತಿಪಟುಗಳ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ 94485 90935, 9964245769, 7892042714, 9481966245 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

4 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

4 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago