Advertisement
ಸುದ್ದಿಗಳು

ಫೆ.22 ರಿಂದ 25 ರವರೆಗೆ ಕರ್ನಾಟಕ ಕುಸ್ತಿ ಹಬ್ಬ

Share

ಮಂಗಳೂರು : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕರ್ನಾಟಕ ರಾಜ್ಯ ಭಾರತೀಯ ಶೈಲಿಯ ಕುಸ್ತಿ ಸಂಘದ ಸಹಯೋಗದಲ್ಲಿ ಫೆಬ್ರವರಿ 22 ರಿಂದ 25 ರವರೆಗೆ 4 ದಿನಗಳ ಕಾಲ ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಹಮ್ಮಿಕೊಂಡಿದೆ.

ದೇಶದ ಹೆಸರಾಂತ ಸುಮಾರು 1200 ಕ್ಕೂ ಹೆಚ್ಚು ಕುಸ್ತಿಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ವಿವಿಧ 3 ಅಖಾಡಗಳಲ್ಲಿ 30 ಪ್ರತ್ಯೇಕ ತೂಕಗಳ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. 80 ಲಕ್ಷ ರೂ. ಮೌಲ್ಯದ ನಗದು ಬಹುಮಾನ, ಪಾರಿತೋಷಕಗಳನ್ನು ನೀಡಲಾಗುವುದು. ಅಜರ್‍ಬೈಜಾನ್, ಜಾರ್ಜಿಯಾ, ಇರಾನ್ ದೇಶಗಳ ಕುಸ್ತಿಪಟುಗಳ ಜೊತೆಗೆ ಭಾರತದ ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ, ಒಲಂಪಿಕ್ ಪಂದ್ಯ ವಿಜೇತ್, ಯೋಗೇಶ್ವರ ದತ್, ಪದ್ಮಶ್ರೀ, ಅರ್ಜುನ್ ಪ್ರಶಸ್ತಿ ವಿಜೇತರು ಹಾಗೂ ನಿವೃತ್ತ ಐಜಿಪಿ ಕರ್ತಾರ ಸಿಂಗ್, ಪದ್ಮಶ್ರೀ, ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ ಒಲಂಪಿಕ್ ಪದಕ ವಿಜೇತ ಸಾಕ್ಷಿ ಮಲಿಕ್, ಅಂತರಾಷ್ಟ್ರೀಯ ಕುಸ್ತಿಪಟು ಮಹ್ಮದ ಮುರಾಡಿ, ಭಾರತ ಕೇಸರಿ ಉಮೇಶ ಚೌದರಿ, ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಾದ ಅಂಶು ಮಲ್ಲಿಕ್, ಜೈಲಾ ನಾಗೀಜಡೆ, ನೈನಾ, ಸಭೀರಾ ಅಲಿಯೆವಾ ಅಲಹವರ್ಡಿ ಮೊದಲಾದ ಹೆಸರಾಮತ ಕುಸ್ತಿ ಪಟುಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ.

ನೋಂದಣಿ: ಫೆಬ್ರವರಿ 22 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕರ್ನಾಟಕ ಕಾಲೇಜು ಮೈದಾನದಲ್ಲಿ ಕುಸ್ತಿಪಟುಗಳ ದೇಹ ತೂಕವನ್ನು ತೆಗೆದುಕೊಳ್ಳಲಾಗುವುದು. ವಯೋಮಿತಿಯಲ್ಲಿ ಭಾಗವಹಿಸುವ ಕುಸ್ತಿಪಟುಗಳು ಜನನ ನೋಂದಣಿ ಅಧಿಕಾರಿಗಳಿಂದ ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಹಾಗೂ ಬ್ಯಾಂಕ್ ಖಾತೆಯ ಪ್ರತಿಯನ್ನು ತರಬೇಕು.

ಸಾರಿಗೆ ವ್ಯವಸ್ಥೆ: ಫೆಬ್ರವರಿ 22 ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ವರೆಗೆ ಧಾರವಾಡದ ಕೇಂದ್ರಿಯ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣ ಕರ್ನಾಟಕ ಕಾಲೇಜು ಮೈದಾನದವರೆಗೆ ಕುಸ್ತಿಪಟುಗಳ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ವಿವರಗಳಿಗೆ 94485 90935, 9964245769, 7892042714, 9481966245 ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

21 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

23 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

24 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago