Advertisement
ಕಲೆ-ಸಂಸ್ಕೃತಿ

ಫೆ.23 ರಂಗಮನೆಯಲ್ಲಿ ಯಕ್ಷಗಾನ ಪಠ್ಯಪುಸ್ತಕ ಪರಿಚಯ

Share

ಸುಳ್ಯ: ಕರ್ನಾಟಕ ಸರಕಾರ ಹೊರತಂದ ಪ್ರಥಮ ಯಕ್ಷಗಾನ ಪಠ್ಯ ಪುಸ್ತಕದ ಪರಿಚಯ ಮತ್ತು ಮಕ್ಕಳ ಯಕ್ಷಗಾನ ಪ್ರದರ್ಶನ ಫೆ.23 ರಂದು ಸಂಜೆ 6.00 ಕ್ಕೆ ಸುಳ್ಯ ಹಳೆಗೇಟಿನ ರಂಗಮನೆಯಲ್ಲಿ ನಡೆಯಲಿದೆ.

ರಂಗಮನೆಯ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ಕದ್ರಿ ನವನೀತ ಶೆಟ್ಟಿ ಉದ್ಘಾಟಿಸಲಿದ್ದಾರೆ. ಕಣಿಪುರ ಯಕ್ಷಗಾನ ಪತ್ರಿಕೆಯ ಸಂಪಾದಕ ಎಂ.ನಾ.ಚಂಬಲ್ತಿಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪಠ್ಯಪುಸ್ತಕ ಸಮಿತಿಯ ಸದಸ್ಯ ಪ್ರಕಾಶ್ ಮೂಡಿತ್ತಾಯ ಪುಸ್ತಕ ಪರಿಚಯ ಮಾಡಲಿದ್ದಾರೆ. ಹಿರಿಯ ಯಕ್ಷರಂಗ ಕಲಾವಿದ ಸುಜನಾ ಸುಳ್ಯ ಉಪಸ್ಥಿತರಿರುತ್ತಾರೆ.

ಕಾರ್ಯಕ್ರಮದ ಅಂಗವಾಗಿ ಗುರು ಕುಮಾರ ಸುಬ್ರಮಣ್ಯ ಅವರ ನಿರ್ದೇಶನದಲ್ಲಿ ಕೇಂದ್ರದ ಹಿಮ್ಮೇಳ ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವ ಚಂಡೆವಾದನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಕೇಂದ್ರದ ವಿದ್ಯಾರ್ಥಿಗಳಿಂದ ಲಕ್ಷ್ಮೀಶ ರೈ ಕಳಂಜ ಇವರ ನಿರ್ದೇಶನದಲ್ಲಿ ಪಂಚವಟಿ- ಖರಾಸುರ ವಧೆ ಯಕ್ಷಗಾನ ಪ್ರಸಂಗ ನಡೆಯಲಿದೆ. ಭಾಗವತಿಕೆಯಲ್ಲಿ ರಾಮಚಂದ್ರ ಅರ್ಭಿತ್ತಾಯ, ಹಿಮ್ಮೇಳನದಲ್ಲಿ ಕುಮಾರ ಸುಬ್ರಮಣ್ಯ, ಕೇಶವ ದೀಕ್ಷಿತ್ ಭಾಗವಹಿಸಲಿದ್ದಾರೆ. ಕಲಾವಿದರಾಗಿ ಕೃತಸ್ವರ ದೀಪ್ತ, ಮನುಜ ನೇಹಿಗ, ಮನ್ವಿತ್ ಪಡ್ಡಂಬೈಲ್, ಸೃಜನಾದಿತ್ಯ ಶೀಲ, ಧ್ಯಾನ್ ವಿಜಯ್, ಸುಮೇಧಾ ಕುಕ್ಕುಜಡ್ಕ, ಗೌತಮ್ ಪೇರಾಲು, ಜಿತೇಶ್ ಮತ್ತು ಶಿಶಿರ ಸೋಮಯಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

17 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago