ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ಸಹ ಸಂಸ್ಥೆಯಾದ ಇನ್ನರ್ ವ್ಹೀಲ್ ಕ್ಲಬ್ ನ ಬೆಳ್ಳಿ ಹಬ್ಬ ಆಚರಣೆ ಫೆ23 ರಂದು ರಥಬೀದಿಯಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಇನ್ನರ್ ವ್ಹೀಲ್ ಕ್ಲಬ್ ರಜತ ವರ್ಷಾಚರಣೆ ಸಮಿತಿಯ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ಪೊಲೀಸ್ ಟ್ರೈನಿಂಗ್ ಸ್ಕೂಲ್ ನ ಪ್ರಾಂಶುಪಾಲೆ ಧರಣೀದೇವಿ ಮಾಲಗತ್ತಿ ಮುಖ್ಯ ಅತಿಥಿಯಾಗುವರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಇನ್ನರ್ ವ್ಹೀಲ್ ಜಿಲ್ಲಾಧ್ಯಕ್ಷೆ ಅನುರಾಧಾ ನಂದಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಜತ ವರ್ಷಾಚರಣೆಯ ಪ್ರಯುಕ್ತ ರಥಬೀದಿಯ ರೋಟರಿ ಶಾಲೆಯ ಸಮೀಪ ನಿರ್ಮಿಸಲಾಗಿರುವ ಬಸ್ ತಂಗುದಾಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮುಖ್ಯ ಅತಿಥಿಯಾಗುವರು ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಡಾ.ಹರ್ಷಿತಾ ಪುರುಷೋತ್ತಮ, ಕಾರ್ಯದರ್ಶಿ ಜಯಾಮಣಿ ಮಾಧವ, ಸುಮಂಗಲಾ ರವಿರಾಜ್, ಮೀನಾಕ್ಷಿ ಹೇಮನಾಥ್, ಮಮತಾ ಮುಕುಂದ ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…