Advertisement
ಸುದ್ದಿಗಳು

ಫೆ 25 ರವರೆಗೆ ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶ – ಅಪರ ಜಿಲ್ಲಾಧಿಕಾರಿ

Share

ಮಂಗಳೂರು:- ಶ್ರಮ ಸಮ್ಮಾನ ಪ್ರಶಸ್ತಿ ಅರ್ಜಿ ಆಹ್ವಾನವನ್ನು ಫೆಬ್ರವರಿ 25 ರವರೆಗೆ ಮುಂದೂಡುವ ಮೂಲಕ ಗರಿಷ್ಠ ಅರ್ಜಿಗಳನ್ನು ಸ್ವೀಕರಿಸಿ ಎಂದು ಅಪರ ಜಿಲ್ಲಾಧಿಕಾರಿ ಎಮ್.ಜೆ.ರೂಪ ಹೇಳಿದರು.

Advertisement
Advertisement

ಗುರುವಾರ ಜಿಲ್ಲಾಧಿಕಾರಿ ಕೋರ್ಟ್ ಹಾಲ್‍ನಲ್ಲಿ ನಡೆದ ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಮಾರ್ಚ್ 1 ರಂದು ಕಾರ್ಮಿಕ ಸಮ್ಮಾನ ದಿನ ಆಚರಣೆ ಕುರಿತು ಜಿಲ್ಲಾ ಮಟ್ಟದ ತ್ರಿಪಕ್ಷೀಯ ನಿರ್ವಹಣಾ ಸಮಿತಿ ಆಯೋಜಿಸಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

Advertisement

ಹಮಾಲಿ ಕಾರ್ಮಿಕರು, ಗೃಹ ಕಾರ್ಮಿಕರು, ಚಿಂದಿ ಆಯುವವರು, ಟೈಲರ್‍ಗಳು, ಮೆಕ್ಯಾನಿಕ್ ಕಾರ್ಮಿಕರು, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಭಟ್ಟಿ ಕಾರ್ಮಿಕರು, ಚಾಲಕರು, ಕಟ್ಟಡ ಕಾರ್ಮಿಕರು ಸೇರಿದಂತೆ ಈ ಎಲ್ಲಾ ಅಸಂಘಟಿತ ವಲಯದಲ್ಲಿ ವಿಶೇಷ ಸಾಧನೆ ಮಾಡಿದ ಕಾರ್ಮಿಕರಿಗೆ ನೀಡಲಾಗುವ ಶ್ರಮ ಸಮ್ಮಾನ ಪ್ರಶಸ್ತಿ ಅರ್ಜಿಯನ್ನು ಸಲ್ಲಿಸಲು ಫೆಬ್ರವರಿ 25 ಸಂಜೆಯವರೆಗೆ ಅವಕಾಶವಿದ್ದು, ಗರಿಷ್ಠ ಅರ್ಜಿಯನ್ನು ಸ್ವೀಕರಿಸಿ ಎಂದು ಸೂಚಿಸಿದರು.

ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಮಾರ್ಚ್ 1 ರಂದು ಶ್ರಮ ಸಮ್ಮಾನ ದಿನ ಆಚರಣೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಿದ್ದು, ಈ ಸಂದರ್ಭದಲ್ಲಿ ಅಸಂಘಟಿತ ವಲಯದಲ್ಲಿ ವಿಶೇಷ ಸಾಧನೆ ಮಾಡಿದ 13 ವರ್ಗದ ಕಾರ್ಮಿಕರನ್ನು ಗುರುತಿಸಿ ಶ್ರಮ ಸಮ್ಮಾನ ಪ್ರಶಸ್ತಿ ನೀಡಲಾಗುತ್ತದೆ. ಇದರಲ್ಲಿ ಪ್ರಥಮ ಪ್ರಶಸ್ತಿ ರೂ 15,000 ಮೌಲ್ಯದ ಸ್ವರ್ಣ ಪದಕ, ದ್ವಿತೀಯ ಪ್ರಶಸ್ತಿ ರೂ. 10,000 ಮೌಲ್ಯದ ರಜತ ಪದಕ, ತೃತೀಯ ಪ್ರಶಸ್ತಿ ರೂ 8,000 ಮೌಲ್ಯದ ರಜತ ಪದಕವನ್ನು ನೀಡಲಾಗುತ್ತದೆ ಎಂದು ಉಪವಿಭಾಗ-1ರ ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೋ ಸಭೆಗೆ ತಿಳಿಸಿದರು.

Advertisement

ಸಭೆಯಲ್ಲಿ ಸರ್ಕಾರದ ಆಶಾದೀಪಾ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕೆಲಸಗಾರರನ್ನು ನೋಂದಾಯಿಸಿಕೊಂಡ ಮಾಲೀಕರಿಗೆ, ಮಾಲೀಕರ ಪಾಲಿನ ಭವಿಷ್ಯನಿಧಿ ವಂತಿಗೆ ಶೇ.12 ಹಾಗೂ ಇ.ಎಸ್.ಐ ವಂತಿಗೆ ಶೇ.3.25 ಮರುಪಾವತಿಯ ಚೆಕ್‍ನ್ನು ಯುನಿಟಿ ಆಸ್ಪತ್ರೆ, ಫಸ್ಟ್ ನ್ಯೂರೋ, ಫಾದರ್ ಮುಲ್ಲರ್ ಆಸ್ಪತ್ರೆ, ಅನುಪಮಾ ಫೀಡ್ಸ್ ಸಂಸ್ಥೆಯ ಮಾಲೀಕರಿಗೆ ಅಪರ ಜಿಲ್ಲಾಧಿಕಾರಿ ವಿತರಿಸಿದರು.
ಸಭೆಯಲ್ಲಿ ಉಪ ವಿಭಾಗ-2ರ ಕಾರ್ಮಿಕ ಅಧಿಕಾರಿ ಅಮರೇಂದ್ರ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಅಸಂಘಟಿತ ವಲಯದ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

10 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

11 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

11 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

11 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

14 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

16 hours ago