Advertisement
ಮಾಹಿತಿ

ಫೆ.27 ರಂದು ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ-ವಿಶೇಷ ಕಾರ್ಯಕ್ರಮ

Share

ಮಂಗಳೂರು : ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಫೆಬ್ರವರಿ 27 ರಂದು “ನಿಮ್ಮ ಅಂಚೆ ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಸೇವೆಗಳು ಭಾರತದಾದ್ಯಂತ 155531 ಅಂಚೆ ಕಚೇರಿಗಳಲ್ಲಿ ಲಭ್ಯವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ [ಮಂಗಳೂರು ಮತ್ತು ಪುತ್ತೂರು ವಿಭಾಗಗಳಲ್ಲಿ] 594 ಅಂಚೆ ಕಚೇರಿಗಳಲ್ಲಿ ಲಭ್ಯವಿದೆ. ಅಂಚೆಯಣ್ಣನ ಮೂಲಕವೂ ಮನೆಬಾಗಿಲಿನಲ್ಲಿ ಈ ಸೇವೆಗಳು ಲಭ್ಯವಿದೆ. ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ ಒಂದು ವಿಶಿಷ್ಟ ಪರಿಕಲ್ಪನೆಯಾಗಿದ್ದು ಇಂದು ಎಲ್ಲಾ ಸಾರ್ವಜನಿಕರಿಗೂ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಖಾತೆಯನ್ನು ತೆರೆಯಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇದು ಸಂಪೂರ್ಣ ಕಾಗದ ರಹಿತವಾಗಿದ್ದು ಯಾವುದೇ ಸಹಿ ಅಥವಾ ದಾಖಲೆಗಳ ಪ್ರತಿ ನೀಡಬೇಕಾಗಿಲ್ಲ. ಆಧಾರ್ ಸಂಖ್ಯೆ ಮೊಬೈಲ್ ಫೋನ್ ನಂಬರ್ ಹಾಗೂ ಪ್ರಾರಂಭಿಕ ಶುಲ್ಕ ರೂಪಾಯಿ 100 ಸಾಕು. ಖಾತೆ ತೆರೆದರೆ ಮನೆಯಿಂದಲೇ ವಿದ್ಯುತ್ ಬಿಲ್ ಪಾವತಿ, ಡಿ.ಟಿ.ಎಚ್ ರಿಚಾರ್ಜ್ , ಮೊಬೈಲ್ ರಿಚಾರ್ಜ್‍ಗಳನ್ನು ಮಾಡಬಹುದು. ಬೇರೆ ಬ್ಯಾಂಕುಗಳಿಗೆ ದಿನದ 24 ಗಂಟೆಯೂ ಹಣ ಕಳುಹಿಸಬಹುದು. ಬೇರೆ ಬ್ಯಾಂಕುಗಳಿಂದ ಹಣವನ್ನು ಈ ಖಾತೆಗೆ ತರಿಸಿಕೊಳ್ಳಲುಬಹುದು. ಅಂಚೆ ಉಳಿತಾಯ ಖಾತೆಯೊಂದಿಗೆ ಜೋಡಿಸಿ ಅದಕ್ಕೆ ಹಣ ಹಾಕುವ ಅಥವಾ ಅದರಿಂದ ಹಣ ತೆಗೆಯುವ ಸೌಲಭ್ಯವೂ ಲಭ್ಯವಿದೆ. ಅಂಚೆ ಕಚೇರಿಯ ಆರ್‍ಡಿ, ಪಿ.ಪಿ.ಎಫ್, ಸುಕನ್ಯಾ ಸಮೃದ್ಧಿ ಖಾತೆಗಳಿಗೆ ಮನೆಯಿಂದಲೇ ಹಣ ಜಮಾ ಮಾಡಬಹುದು. ಸರದಿಯ ಸಾಲುಗಳಲ್ಲಿ ನಿಲ್ಲಬೇಕಾಗಿಲ್ಲ. ಸರಕಾರದ ಬೇರೆ ಬೇರೆ ಇಲಾಖೆಗಳಿಂದ ದೊರಕುವ ಸಹಾಯಧನ, ವೃದ್ಧಾಪ್ಯ ವೇತನ, ವಿಕಲಚೇತನ ವೇತನ, ವಿಧವಾ ವೇತನ ಇತ್ಯಾದಿಗಳನ್ನು ಅರ್ಹ ಫಲಾನುಭವಿಗಳು ಪಡೆಯಬಹುದು. ಕ್ಯೂಆರ್ ಕಾರ್ಡನ್ನು ಉಚಿತವಾಗಿ ನೀಡಲಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಸಮೀಪದ ಅಂಚೆ ಕಚೇರಿಗಳಿಗೆ ಭೇಟಿ ನೀಡಿ ಅಥವಾ ಅಂಚೆಯಣ್ಣನ ಮೂಲಕ ಈ ಖಾತೆಗಳನ್ನು ತೆರೆದು ಆ ಮೂಲಕ ಡಿಜಿಟಲ್ ಬ್ಯಾಂಕಿನ ಸೌಲಭ್ಯಗಳನ್ನು ಅತ್ಯಂತ ಸರಳವಾಗಿ ಮನೆಯಂಗಳದಲ್ಲೇ ಪಡೆದುಕೊಳ್ಳಬಹುದು ಎಂದು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

9 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

13 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

13 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

14 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

14 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

1 day ago