Advertisement
ಮಾಹಿತಿ

ಫೆ.27 ರಂದು ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ-ವಿಶೇಷ ಕಾರ್ಯಕ್ರಮ

Share

ಮಂಗಳೂರು : ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಫೆಬ್ರವರಿ 27 ರಂದು “ನಿಮ್ಮ ಅಂಚೆ ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಸೇವೆಗಳು ಭಾರತದಾದ್ಯಂತ 155531 ಅಂಚೆ ಕಚೇರಿಗಳಲ್ಲಿ ಲಭ್ಯವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ [ಮಂಗಳೂರು ಮತ್ತು ಪುತ್ತೂರು ವಿಭಾಗಗಳಲ್ಲಿ] 594 ಅಂಚೆ ಕಚೇರಿಗಳಲ್ಲಿ ಲಭ್ಯವಿದೆ. ಅಂಚೆಯಣ್ಣನ ಮೂಲಕವೂ ಮನೆಬಾಗಿಲಿನಲ್ಲಿ ಈ ಸೇವೆಗಳು ಲಭ್ಯವಿದೆ. ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ ಒಂದು ವಿಶಿಷ್ಟ ಪರಿಕಲ್ಪನೆಯಾಗಿದ್ದು ಇಂದು ಎಲ್ಲಾ ಸಾರ್ವಜನಿಕರಿಗೂ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಖಾತೆಯನ್ನು ತೆರೆಯಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇದು ಸಂಪೂರ್ಣ ಕಾಗದ ರಹಿತವಾಗಿದ್ದು ಯಾವುದೇ ಸಹಿ ಅಥವಾ ದಾಖಲೆಗಳ ಪ್ರತಿ ನೀಡಬೇಕಾಗಿಲ್ಲ. ಆಧಾರ್ ಸಂಖ್ಯೆ ಮೊಬೈಲ್ ಫೋನ್ ನಂಬರ್ ಹಾಗೂ ಪ್ರಾರಂಭಿಕ ಶುಲ್ಕ ರೂಪಾಯಿ 100 ಸಾಕು. ಖಾತೆ ತೆರೆದರೆ ಮನೆಯಿಂದಲೇ ವಿದ್ಯುತ್ ಬಿಲ್ ಪಾವತಿ, ಡಿ.ಟಿ.ಎಚ್ ರಿಚಾರ್ಜ್ , ಮೊಬೈಲ್ ರಿಚಾರ್ಜ್‍ಗಳನ್ನು ಮಾಡಬಹುದು. ಬೇರೆ ಬ್ಯಾಂಕುಗಳಿಗೆ ದಿನದ 24 ಗಂಟೆಯೂ ಹಣ ಕಳುಹಿಸಬಹುದು. ಬೇರೆ ಬ್ಯಾಂಕುಗಳಿಂದ ಹಣವನ್ನು ಈ ಖಾತೆಗೆ ತರಿಸಿಕೊಳ್ಳಲುಬಹುದು. ಅಂಚೆ ಉಳಿತಾಯ ಖಾತೆಯೊಂದಿಗೆ ಜೋಡಿಸಿ ಅದಕ್ಕೆ ಹಣ ಹಾಕುವ ಅಥವಾ ಅದರಿಂದ ಹಣ ತೆಗೆಯುವ ಸೌಲಭ್ಯವೂ ಲಭ್ಯವಿದೆ. ಅಂಚೆ ಕಚೇರಿಯ ಆರ್‍ಡಿ, ಪಿ.ಪಿ.ಎಫ್, ಸುಕನ್ಯಾ ಸಮೃದ್ಧಿ ಖಾತೆಗಳಿಗೆ ಮನೆಯಿಂದಲೇ ಹಣ ಜಮಾ ಮಾಡಬಹುದು. ಸರದಿಯ ಸಾಲುಗಳಲ್ಲಿ ನಿಲ್ಲಬೇಕಾಗಿಲ್ಲ. ಸರಕಾರದ ಬೇರೆ ಬೇರೆ ಇಲಾಖೆಗಳಿಂದ ದೊರಕುವ ಸಹಾಯಧನ, ವೃದ್ಧಾಪ್ಯ ವೇತನ, ವಿಕಲಚೇತನ ವೇತನ, ವಿಧವಾ ವೇತನ ಇತ್ಯಾದಿಗಳನ್ನು ಅರ್ಹ ಫಲಾನುಭವಿಗಳು ಪಡೆಯಬಹುದು. ಕ್ಯೂಆರ್ ಕಾರ್ಡನ್ನು ಉಚಿತವಾಗಿ ನೀಡಲಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಸಮೀಪದ ಅಂಚೆ ಕಚೇರಿಗಳಿಗೆ ಭೇಟಿ ನೀಡಿ ಅಥವಾ ಅಂಚೆಯಣ್ಣನ ಮೂಲಕ ಈ ಖಾತೆಗಳನ್ನು ತೆರೆದು ಆ ಮೂಲಕ ಡಿಜಿಟಲ್ ಬ್ಯಾಂಕಿನ ಸೌಲಭ್ಯಗಳನ್ನು ಅತ್ಯಂತ ಸರಳವಾಗಿ ಮನೆಯಂಗಳದಲ್ಲೇ ಪಡೆದುಕೊಳ್ಳಬಹುದು ಎಂದು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

20 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

21 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

22 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago