Advertisement
ಮಾಹಿತಿ

ಫೆ.27 ರಂದು ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ-ವಿಶೇಷ ಕಾರ್ಯಕ್ರಮ

Share

ಮಂಗಳೂರು : ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಫೆಬ್ರವರಿ 27 ರಂದು “ನಿಮ್ಮ ಅಂಚೆ ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಸೇವೆಗಳು ಭಾರತದಾದ್ಯಂತ 155531 ಅಂಚೆ ಕಚೇರಿಗಳಲ್ಲಿ ಲಭ್ಯವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ [ಮಂಗಳೂರು ಮತ್ತು ಪುತ್ತೂರು ವಿಭಾಗಗಳಲ್ಲಿ] 594 ಅಂಚೆ ಕಚೇರಿಗಳಲ್ಲಿ ಲಭ್ಯವಿದೆ. ಅಂಚೆಯಣ್ಣನ ಮೂಲಕವೂ ಮನೆಬಾಗಿಲಿನಲ್ಲಿ ಈ ಸೇವೆಗಳು ಲಭ್ಯವಿದೆ. ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ ಒಂದು ವಿಶಿಷ್ಟ ಪರಿಕಲ್ಪನೆಯಾಗಿದ್ದು ಇಂದು ಎಲ್ಲಾ ಸಾರ್ವಜನಿಕರಿಗೂ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಖಾತೆಯನ್ನು ತೆರೆಯಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇದು ಸಂಪೂರ್ಣ ಕಾಗದ ರಹಿತವಾಗಿದ್ದು ಯಾವುದೇ ಸಹಿ ಅಥವಾ ದಾಖಲೆಗಳ ಪ್ರತಿ ನೀಡಬೇಕಾಗಿಲ್ಲ. ಆಧಾರ್ ಸಂಖ್ಯೆ ಮೊಬೈಲ್ ಫೋನ್ ನಂಬರ್ ಹಾಗೂ ಪ್ರಾರಂಭಿಕ ಶುಲ್ಕ ರೂಪಾಯಿ 100 ಸಾಕು. ಖಾತೆ ತೆರೆದರೆ ಮನೆಯಿಂದಲೇ ವಿದ್ಯುತ್ ಬಿಲ್ ಪಾವತಿ, ಡಿ.ಟಿ.ಎಚ್ ರಿಚಾರ್ಜ್ , ಮೊಬೈಲ್ ರಿಚಾರ್ಜ್‍ಗಳನ್ನು ಮಾಡಬಹುದು. ಬೇರೆ ಬ್ಯಾಂಕುಗಳಿಗೆ ದಿನದ 24 ಗಂಟೆಯೂ ಹಣ ಕಳುಹಿಸಬಹುದು. ಬೇರೆ ಬ್ಯಾಂಕುಗಳಿಂದ ಹಣವನ್ನು ಈ ಖಾತೆಗೆ ತರಿಸಿಕೊಳ್ಳಲುಬಹುದು. ಅಂಚೆ ಉಳಿತಾಯ ಖಾತೆಯೊಂದಿಗೆ ಜೋಡಿಸಿ ಅದಕ್ಕೆ ಹಣ ಹಾಕುವ ಅಥವಾ ಅದರಿಂದ ಹಣ ತೆಗೆಯುವ ಸೌಲಭ್ಯವೂ ಲಭ್ಯವಿದೆ. ಅಂಚೆ ಕಚೇರಿಯ ಆರ್‍ಡಿ, ಪಿ.ಪಿ.ಎಫ್, ಸುಕನ್ಯಾ ಸಮೃದ್ಧಿ ಖಾತೆಗಳಿಗೆ ಮನೆಯಿಂದಲೇ ಹಣ ಜಮಾ ಮಾಡಬಹುದು. ಸರದಿಯ ಸಾಲುಗಳಲ್ಲಿ ನಿಲ್ಲಬೇಕಾಗಿಲ್ಲ. ಸರಕಾರದ ಬೇರೆ ಬೇರೆ ಇಲಾಖೆಗಳಿಂದ ದೊರಕುವ ಸಹಾಯಧನ, ವೃದ್ಧಾಪ್ಯ ವೇತನ, ವಿಕಲಚೇತನ ವೇತನ, ವಿಧವಾ ವೇತನ ಇತ್ಯಾದಿಗಳನ್ನು ಅರ್ಹ ಫಲಾನುಭವಿಗಳು ಪಡೆಯಬಹುದು. ಕ್ಯೂಆರ್ ಕಾರ್ಡನ್ನು ಉಚಿತವಾಗಿ ನೀಡಲಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಸಮೀಪದ ಅಂಚೆ ಕಚೇರಿಗಳಿಗೆ ಭೇಟಿ ನೀಡಿ ಅಥವಾ ಅಂಚೆಯಣ್ಣನ ಮೂಲಕ ಈ ಖಾತೆಗಳನ್ನು ತೆರೆದು ಆ ಮೂಲಕ ಡಿಜಿಟಲ್ ಬ್ಯಾಂಕಿನ ಸೌಲಭ್ಯಗಳನ್ನು ಅತ್ಯಂತ ಸರಳವಾಗಿ ಮನೆಯಂಗಳದಲ್ಲೇ ಪಡೆದುಕೊಳ್ಳಬಹುದು ಎಂದು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

6 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

7 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

7 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

12 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

15 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

19 hours ago