Advertisement
ಮಾಹಿತಿ

ಫೆ.27 ರಂದು ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ-ವಿಶೇಷ ಕಾರ್ಯಕ್ರಮ

Share

ಮಂಗಳೂರು : ಭಾರತೀಯ ಅಂಚೆ, ಮಂಗಳೂರು ಹಾಗೂ ಪುತ್ತೂರು ವಿಭಾಗಗಳಿಂದ ಫೆಬ್ರವರಿ 27 ರಂದು “ನಿಮ್ಮ ಅಂಚೆ ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಸೇವೆಗಳು ಭಾರತದಾದ್ಯಂತ 155531 ಅಂಚೆ ಕಚೇರಿಗಳಲ್ಲಿ ಲಭ್ಯವಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ [ಮಂಗಳೂರು ಮತ್ತು ಪುತ್ತೂರು ವಿಭಾಗಗಳಲ್ಲಿ] 594 ಅಂಚೆ ಕಚೇರಿಗಳಲ್ಲಿ ಲಭ್ಯವಿದೆ. ಅಂಚೆಯಣ್ಣನ ಮೂಲಕವೂ ಮನೆಬಾಗಿಲಿನಲ್ಲಿ ಈ ಸೇವೆಗಳು ಲಭ್ಯವಿದೆ. ನಿಮ್ಮ ಅಂಚೆ, ನಿಮ್ಮ ಬ್ಯಾಂಕ್, ಕ್ಷಣದಲ್ಲೇ ಖಾತೆ ಒಂದು ವಿಶಿಷ್ಟ ಪರಿಕಲ್ಪನೆಯಾಗಿದ್ದು ಇಂದು ಎಲ್ಲಾ ಸಾರ್ವಜನಿಕರಿಗೂ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ ಖಾತೆಯನ್ನು ತೆರೆಯಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇದು ಸಂಪೂರ್ಣ ಕಾಗದ ರಹಿತವಾಗಿದ್ದು ಯಾವುದೇ ಸಹಿ ಅಥವಾ ದಾಖಲೆಗಳ ಪ್ರತಿ ನೀಡಬೇಕಾಗಿಲ್ಲ. ಆಧಾರ್ ಸಂಖ್ಯೆ ಮೊಬೈಲ್ ಫೋನ್ ನಂಬರ್ ಹಾಗೂ ಪ್ರಾರಂಭಿಕ ಶುಲ್ಕ ರೂಪಾಯಿ 100 ಸಾಕು. ಖಾತೆ ತೆರೆದರೆ ಮನೆಯಿಂದಲೇ ವಿದ್ಯುತ್ ಬಿಲ್ ಪಾವತಿ, ಡಿ.ಟಿ.ಎಚ್ ರಿಚಾರ್ಜ್ , ಮೊಬೈಲ್ ರಿಚಾರ್ಜ್‍ಗಳನ್ನು ಮಾಡಬಹುದು. ಬೇರೆ ಬ್ಯಾಂಕುಗಳಿಗೆ ದಿನದ 24 ಗಂಟೆಯೂ ಹಣ ಕಳುಹಿಸಬಹುದು. ಬೇರೆ ಬ್ಯಾಂಕುಗಳಿಂದ ಹಣವನ್ನು ಈ ಖಾತೆಗೆ ತರಿಸಿಕೊಳ್ಳಲುಬಹುದು. ಅಂಚೆ ಉಳಿತಾಯ ಖಾತೆಯೊಂದಿಗೆ ಜೋಡಿಸಿ ಅದಕ್ಕೆ ಹಣ ಹಾಕುವ ಅಥವಾ ಅದರಿಂದ ಹಣ ತೆಗೆಯುವ ಸೌಲಭ್ಯವೂ ಲಭ್ಯವಿದೆ. ಅಂಚೆ ಕಚೇರಿಯ ಆರ್‍ಡಿ, ಪಿ.ಪಿ.ಎಫ್, ಸುಕನ್ಯಾ ಸಮೃದ್ಧಿ ಖಾತೆಗಳಿಗೆ ಮನೆಯಿಂದಲೇ ಹಣ ಜಮಾ ಮಾಡಬಹುದು. ಸರದಿಯ ಸಾಲುಗಳಲ್ಲಿ ನಿಲ್ಲಬೇಕಾಗಿಲ್ಲ. ಸರಕಾರದ ಬೇರೆ ಬೇರೆ ಇಲಾಖೆಗಳಿಂದ ದೊರಕುವ ಸಹಾಯಧನ, ವೃದ್ಧಾಪ್ಯ ವೇತನ, ವಿಕಲಚೇತನ ವೇತನ, ವಿಧವಾ ವೇತನ ಇತ್ಯಾದಿಗಳನ್ನು ಅರ್ಹ ಫಲಾನುಭವಿಗಳು ಪಡೆಯಬಹುದು. ಕ್ಯೂಆರ್ ಕಾರ್ಡನ್ನು ಉಚಿತವಾಗಿ ನೀಡಲಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಸಮೀಪದ ಅಂಚೆ ಕಚೇರಿಗಳಿಗೆ ಭೇಟಿ ನೀಡಿ ಅಥವಾ ಅಂಚೆಯಣ್ಣನ ಮೂಲಕ ಈ ಖಾತೆಗಳನ್ನು ತೆರೆದು ಆ ಮೂಲಕ ಡಿಜಿಟಲ್ ಬ್ಯಾಂಕಿನ ಸೌಲಭ್ಯಗಳನ್ನು ಅತ್ಯಂತ ಸರಳವಾಗಿ ಮನೆಯಂಗಳದಲ್ಲೇ ಪಡೆದುಕೊಳ್ಳಬಹುದು ಎಂದು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

8 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

8 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

1 day ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago