Advertisement
ಸುದ್ದಿಗಳು

ಫೆ.29 ರಂದು ಪೆರಾಜೆ ಗ್ರಾಮ ಪಂಚಾಯಿತಿಯಲ್ಲಿ ಬಿ.ಜೆ.ಪಿ. ಆಡಳಿತದ ಬೆಳ್ಳಿ ವರ್ಷಾಚರಣೆ

Share

ಸುಳ್ಯ: ಪೆರಾಜೆ ಗ್ರಾಮ ಪಂಚಾಯಿತಿಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಆಯ್ಕೆಯಾಗಿ ಬಂದ ಸದಸ್ಯರು ಕಳೆದ 25 ವರ್ಷಗಳಿಂದ ಆಡಳಿತ ನಡೆಸುತ್ತಿದ್ದು ಈ ಬಾರಿ ಬೆಳ್ಳಿ ವರ್ಷ ಕಾರ್ಯಕ್ರಮವನ್ನು ಫೆ.29ರಂದು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾ ಮಂದಿರದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮುಖಂಡ, ತಾ.ಪಂ.ಸದಸ್ಯ ನಾಗೇಶ್ ಕುಂದಲ್ಪಾಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಫೆ.29ರಂದು ನಡೆಯುವ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಆರ್‍ಎಸ್‍ಎಸ್ ಮಂಗಳೂರು ವಿಭಾಗ ಕಾರ್ಯವಾಹ ನ.ಸೀತಾರಾಮ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಗೌರವಾರ್ಪಣೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಅಪ್ಪಚ್ಚು ರಂಜನ್, ಎಸ್.ಅಂಗಾರ, ಸುನಿಲ್ ಸುಬ್ರಮಣಿ, ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಮಡಿಕೇರಿ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷ ಕಾಂಗೀರ ಸತೀಶ್, ಮಡಿಕೆರಿ ತಾ.ಪಂ. ಅಧ್ಯಕ್ಷೆ ಶೋಭಾ ಮೋಹನ್, ಸದಸ್ಯ ನಾಗೇಶ್ ಕುಂದಲ್ಪಾಡಿ, ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ಎ.ಪಿ.ಎಂ.ಸಿ. ಉಪಾಧ್ಯಕ್ಷ ಅನಂತ ಎನ್.ಸಿ., ಪೆರಾಜೆ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಧರಣೀಧರ, ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ ಭಾಗವಹಿಸಲಿದ್ದಾರೆ ಎಂದು ಅವರು ವಿವರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ನಂಜಪ್ಪ ನಿಡ್ಯಮಲೆ, ಪ್ರವೀಣ್ ಮಜಿಕೋಡಿ, ನೆಕ್ಕಿಲ ಪ್ರಸನ್ನ, ಉದಯ ಕುಮಾರ್ ಕುಂಬಳಚೇರಿ, ಮಹೇಶ್ ಮೂಲೆಮಜಲು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

4 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

4 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

4 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

11 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

12 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

12 hours ago