ಸುಳ್ಯ: ನಾಡ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ಸುಳ್ಯ ತಾಲೂಕು ಸವಿತಾ ಸಮಾಜ, ಸವಿತಾ ಸಮಾಜ ಮಹಿಳಾ ಘಟಕ ಮತ್ತು ಸವಿತಾ ಯುವ ಘಟಕ ಮತ್ತು ಬಾರ್ಬರ್ಸ್ ಅಸೋಸಿಯೇಷನ್ ಸುಳ್ಯ ತಾಲೂಕು ಇವರುಗಳ ಸಂಯುಕ್ತ ಆಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಹಾಗೂ ಸತ್ಯನಾರಾಯಣ ಪೂಜೆಯ ದಶಮಾನೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಫೆ.4 ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಳದ ಮುಂಭಾಗದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಗುರುರಾಜ್ ಅಜ್ಜಾವರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದ ವಿವರ ನೀಡಿದರು. ಅಂದು ಸಂಜೆ ಕಾರ್ಯಕ್ರಮ ನಡೆಯಲಿದ್ದು, ಸವಿತಾ ಧರ್ಮಪೀಠದ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತಿಯಲ್ಲಿ ಶಾಸಕ ಎಸ್.ಅಂಗಾರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯುವುದು. ವಿಧಾನ ಪರಿಷತ್ ಸದಸ್ಯ ಎಂ.ಸಿ.ವೇಣುಗೋಪಾಲ ಪ್ರಶಸ್ತಿ ಪ್ರದಾನ ಮಾಡುವರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಸೇರಿದಂತೆ ಹಲವು ಗಣ್ಯ ರು ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ಸವಿತಾ ಸಮಾಜದ ಮುಖಂಡ ಹಾಗೂ ಪತ್ರಕರ್ತ ಹರೀಶ್ ಬಂಟ್ವಾಳ ರಿಗೆ ‘ಸವಿತಾ ಶ್ರೀ ಪ್ರಶಸ್ತಿ’ ಹಾಗೂ ಸವಿತಾ ಸಮಾಜದ ಸ್ಥಾಪಕಾಧ್ಯಕ್ಷ ಮೋಹನ್ ಭಂಡಾರಿಯವರಿಗೆ ‘ಸಾಧನ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಮಾಜಿ ಅಧ್ಯಕ್ಷರಾದ ಗಂಗಾಧರ ಎಂ.ಎಂ., ಯಸ್.ಪದ್ಮನಾಭ, ಕೆಂಚಪ್ಪ ಭಂಡಾರಿ, ದಿನೇಶ್ ಗುತ್ತಿಗಾರು, ವಸಂತ ಮೂರಾಜೆಯವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಹಿಳಾ ಸಮಿತಿ ಅಧ್ಯಕ್ಷೆ ಇಂದಿರಾ ಪದ್ಮನಾಭ, ಕಾರ್ಯದರ್ಶಿ ಭಾರತಿ ಬಂಟ್ವಾಳ್, ಯುವ ಘಟಕದ ಖಜಾಂಚಿ ನವೀನ್ ಸೂಂತೋಡು, ಬಾರ್ಬರ್ಸ್ ಅಸೋಸಿಯೇಷನ್ ಖಜಾಂಚಿ ಧನು ಮೂರ್ನಾಡು, ಗೀತಾಂಜಲಿ, ಸಮಿತಿ ಗೌರವ ಸಲಹೆಗಾರ ಹರೀಶ್ ಬಂಟ್ವಾಳ್ ಇದ್ದರು.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…