Advertisement
ರಾಷ್ಟ್ರೀಯ

ಫೆ.8ರಂದು ದಿಲ್ಲಿ ವಿಧಾನಸಭಾ ಚುನಾವಣೆ, ಫೆ.11ಕ್ಕೆ ಫಲಿತಾಂಶ ಪ್ರಕಟ

Share

ಹೊಸದಿಲ್ಲಿ : ಚುನಾವಣಾ ಆಯೋಗವು ಸೋಮವಾರ ದಿಲ್ಲಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಫೆ.8ರಂದು ಮತದಾನ ನಡೆಯಲಿದ್ದು, ಫೆ.11ರಂದು ಫಲಿತಾಂಶಗಳು ಪ್ರಕಟಗೊಳ್ಳಲಿವೆ. ದಿಲ್ಲಿ ವಿಧಾನಸಭೆಯ ಅಧಿಕಾರಾವಧಿಯು ಫೆ.22ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ನೂತನ ವಿಧಾನಸಭೆ ರಚನೆಯಾಗಬೇಕಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು, ಮಾದರಿ ನೀತಿ ಸಂಹಿತೆಯು ಸೋಮವಾರದಿಂದಲೇ ಜಾರಿಗೊಂಡಿದ್ದು, ಒಂದೇ ಹಂತದಲ್ಲಿ ಎಲ್ಲ 13,750 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಜ.14ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಜ.21 ಕೊನೆಯ ದಿನಾಂಕವಾಗಿದೆ. ಜ.22ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜ.24 ನಾಮಪತ್ರಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಫೆ.13ಕ್ಕೆ ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನೂ ಪ್ರಕಟಿಸಿದ್ದು, ದಿಲ್ಲಿಯಲ್ಲಿ 1.46 ಕೋ.ಅರ್ಹ ಮತದಾರರಿದ್ದಾರೆ.

2015ರ ವಿಧಾನಸಭೆಯಲ್ಲಿ 70 ವಿಧಾನಸಭಾ ಕ್ಷೇತ್ರಗಳ ಪೈಕಿ 67ನ್ನು ಗೆದ್ದುಕೊಂಡಿದ್ದ ಆಮ್ ಆದ್ಮಿ ಪಾರ್ಟಿಯು ಅಧಿಕಾರಕ್ಕೇರಿತ್ತು. ಬಿಜೆಪಿ ಕೇವಲ ಮೂರು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದರೆ, ಕಾಂಗ್ರೆಸ್‌ಗೆ ಒಂದೂ ಸ್ಥಾನ ದೊರಕಿರಲಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

5 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

12 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

12 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

12 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

21 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

21 hours ago