Advertisement
ರಾಷ್ಟ್ರೀಯ

ಫೆ.8ರಂದು ದಿಲ್ಲಿ ವಿಧಾನಸಭಾ ಚುನಾವಣೆ, ಫೆ.11ಕ್ಕೆ ಫಲಿತಾಂಶ ಪ್ರಕಟ

Share

ಹೊಸದಿಲ್ಲಿ : ಚುನಾವಣಾ ಆಯೋಗವು ಸೋಮವಾರ ದಿಲ್ಲಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಫೆ.8ರಂದು ಮತದಾನ ನಡೆಯಲಿದ್ದು, ಫೆ.11ರಂದು ಫಲಿತಾಂಶಗಳು ಪ್ರಕಟಗೊಳ್ಳಲಿವೆ. ದಿಲ್ಲಿ ವಿಧಾನಸಭೆಯ ಅಧಿಕಾರಾವಧಿಯು ಫೆ.22ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ನೂತನ ವಿಧಾನಸಭೆ ರಚನೆಯಾಗಬೇಕಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು, ಮಾದರಿ ನೀತಿ ಸಂಹಿತೆಯು ಸೋಮವಾರದಿಂದಲೇ ಜಾರಿಗೊಂಡಿದ್ದು, ಒಂದೇ ಹಂತದಲ್ಲಿ ಎಲ್ಲ 13,750 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಜ.14ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಜ.21 ಕೊನೆಯ ದಿನಾಂಕವಾಗಿದೆ. ಜ.22ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜ.24 ನಾಮಪತ್ರಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಫೆ.13ಕ್ಕೆ ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನೂ ಪ್ರಕಟಿಸಿದ್ದು, ದಿಲ್ಲಿಯಲ್ಲಿ 1.46 ಕೋ.ಅರ್ಹ ಮತದಾರರಿದ್ದಾರೆ.

2015ರ ವಿಧಾನಸಭೆಯಲ್ಲಿ 70 ವಿಧಾನಸಭಾ ಕ್ಷೇತ್ರಗಳ ಪೈಕಿ 67ನ್ನು ಗೆದ್ದುಕೊಂಡಿದ್ದ ಆಮ್ ಆದ್ಮಿ ಪಾರ್ಟಿಯು ಅಧಿಕಾರಕ್ಕೇರಿತ್ತು. ಬಿಜೆಪಿ ಕೇವಲ ಮೂರು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದರೆ, ಕಾಂಗ್ರೆಸ್‌ಗೆ ಒಂದೂ ಸ್ಥಾನ ದೊರಕಿರಲಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

27 minutes ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

6 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

7 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

14 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

22 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

24 hours ago