Advertisement
ರಾಷ್ಟ್ರೀಯ

ಫೆ.8ರಂದು ದಿಲ್ಲಿ ವಿಧಾನಸಭಾ ಚುನಾವಣೆ, ಫೆ.11ಕ್ಕೆ ಫಲಿತಾಂಶ ಪ್ರಕಟ

Share

ಹೊಸದಿಲ್ಲಿ : ಚುನಾವಣಾ ಆಯೋಗವು ಸೋಮವಾರ ದಿಲ್ಲಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಫೆ.8ರಂದು ಮತದಾನ ನಡೆಯಲಿದ್ದು, ಫೆ.11ರಂದು ಫಲಿತಾಂಶಗಳು ಪ್ರಕಟಗೊಳ್ಳಲಿವೆ. ದಿಲ್ಲಿ ವಿಧಾನಸಭೆಯ ಅಧಿಕಾರಾವಧಿಯು ಫೆ.22ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ನೂತನ ವಿಧಾನಸಭೆ ರಚನೆಯಾಗಬೇಕಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು, ಮಾದರಿ ನೀತಿ ಸಂಹಿತೆಯು ಸೋಮವಾರದಿಂದಲೇ ಜಾರಿಗೊಂಡಿದ್ದು, ಒಂದೇ ಹಂತದಲ್ಲಿ ಎಲ್ಲ 13,750 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಜ.14ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಜ.21 ಕೊನೆಯ ದಿನಾಂಕವಾಗಿದೆ. ಜ.22ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜ.24 ನಾಮಪತ್ರಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಫೆ.13ಕ್ಕೆ ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನೂ ಪ್ರಕಟಿಸಿದ್ದು, ದಿಲ್ಲಿಯಲ್ಲಿ 1.46 ಕೋ.ಅರ್ಹ ಮತದಾರರಿದ್ದಾರೆ.

2015ರ ವಿಧಾನಸಭೆಯಲ್ಲಿ 70 ವಿಧಾನಸಭಾ ಕ್ಷೇತ್ರಗಳ ಪೈಕಿ 67ನ್ನು ಗೆದ್ದುಕೊಂಡಿದ್ದ ಆಮ್ ಆದ್ಮಿ ಪಾರ್ಟಿಯು ಅಧಿಕಾರಕ್ಕೇರಿತ್ತು. ಬಿಜೆಪಿ ಕೇವಲ ಮೂರು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದರೆ, ಕಾಂಗ್ರೆಸ್‌ಗೆ ಒಂದೂ ಸ್ಥಾನ ದೊರಕಿರಲಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago