Advertisement
ರಾಷ್ಟ್ರೀಯ

ಫೆ.8ರಂದು ದಿಲ್ಲಿ ವಿಧಾನಸಭಾ ಚುನಾವಣೆ, ಫೆ.11ಕ್ಕೆ ಫಲಿತಾಂಶ ಪ್ರಕಟ

Share

ಹೊಸದಿಲ್ಲಿ : ಚುನಾವಣಾ ಆಯೋಗವು ಸೋಮವಾರ ದಿಲ್ಲಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲ 70 ವಿಧಾನಸಭಾ ಸ್ಥಾನಗಳಿಗೆ ಫೆ.8ರಂದು ಮತದಾನ ನಡೆಯಲಿದ್ದು, ಫೆ.11ರಂದು ಫಲಿತಾಂಶಗಳು ಪ್ರಕಟಗೊಳ್ಳಲಿವೆ. ದಿಲ್ಲಿ ವಿಧಾನಸಭೆಯ ಅಧಿಕಾರಾವಧಿಯು ಫೆ.22ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ನೂತನ ವಿಧಾನಸಭೆ ರಚನೆಯಾಗಬೇಕಿದೆ.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು, ಮಾದರಿ ನೀತಿ ಸಂಹಿತೆಯು ಸೋಮವಾರದಿಂದಲೇ ಜಾರಿಗೊಂಡಿದ್ದು, ಒಂದೇ ಹಂತದಲ್ಲಿ ಎಲ್ಲ 13,750 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಜ.14ರಂದು ಅಧಿಸೂಚನೆ ಪ್ರಕಟಗೊಳ್ಳಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಜ.21 ಕೊನೆಯ ದಿನಾಂಕವಾಗಿದೆ. ಜ.22ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜ.24 ನಾಮಪತ್ರಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಫೆ.13ಕ್ಕೆ ಚುನಾವಣಾ ಪ್ರಕ್ರಿಯೆಯು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನೂ ಪ್ರಕಟಿಸಿದ್ದು, ದಿಲ್ಲಿಯಲ್ಲಿ 1.46 ಕೋ.ಅರ್ಹ ಮತದಾರರಿದ್ದಾರೆ.

2015ರ ವಿಧಾನಸಭೆಯಲ್ಲಿ 70 ವಿಧಾನಸಭಾ ಕ್ಷೇತ್ರಗಳ ಪೈಕಿ 67ನ್ನು ಗೆದ್ದುಕೊಂಡಿದ್ದ ಆಮ್ ಆದ್ಮಿ ಪಾರ್ಟಿಯು ಅಧಿಕಾರಕ್ಕೇರಿತ್ತು. ಬಿಜೆಪಿ ಕೇವಲ ಮೂರು ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದರೆ, ಕಾಂಗ್ರೆಸ್‌ಗೆ ಒಂದೂ ಸ್ಥಾನ ದೊರಕಿರಲಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

7 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

9 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

10 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago