Advertisement
ಕಲೆ-ಸಂಸ್ಕೃತಿ

ಫೆ.8 : ಪುತ್ತೂರಿನಲ್ಲಿ ಭಜನಾ ಸತ್ಸಂಗ ಸಮಾವೇಶ – 2020

Share

ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಸತ್ಸಂಗ ಸಮಿತಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ಇದರ ವತಿಯಿಂದ ಭಜನಾ ಸತ್ಸಂಗ ಸಮಾವೇಶ – 2020, ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಭಜನಾ ಸಂಕೀರ್ತನಾ ಮೆರವಣಿಗೆಯು ಫೆ. 8 ರಂದು ಪುತ್ತೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯಲಿರುವುದು ಎಂದು ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ ತಿಳಿಸಿದರು.

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 8.30ರಿಂದ 9.30ರ ತನಕ ನೋಂದಾವಣೆ ನಡೆಯಲಿದ್ದು, 9.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವುದು. ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜರೇಖರಾನಂದ ಸ್ವಾಮೀಜಿ, ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳಿಗ್ಗೆ 10ರಿಂದ ಸಾಮೂಹಿಕ ಭಜನೆ, ಕುಣಿತ ಭಜನೆ ಪ್ರಾತ್ಯಕ್ಷಿತೆ ನಡೆಯಲಿರುವುದು. ಬೆಳಿಗ್ಗೆ 11 ಗಂಟೆಯಿಂದ ಕೇಂದ್ರ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಗ್ರಾಮ ವಿಕಾಸ ಕಾರ್ಯಕ್ರಮ ನಡೆಯಲಿರುವುದು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿರುವರು. ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಪುತ್ತೂರು ಶಾಸಕ ಸಂಜೀವ ಮಠಂದೂರು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡುವರು. ಶ್ರೀ ಕ್ಷೇ.ಧ.ಗ್ರಾ.ಯೋ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್. ಮಂಜುನಾಥ್ ಶುಭಾಶಂಸನೆಗೈಯುವರು.

ಸಂಜೆ ಗಂಟೆ 4 ರಿಂದ ಸಾಮೂಹಿಕ ಕೋಟಿ ಶಿವಪಂಚಾಕ್ಷರಿ ಜಪಯಜ್ಞ, ಸಂಜೆ 4.30ರಿಂದ ಭಜನೋತ್ಸವ, 5.30ರಿಂದ ಭಜನಾ ಸತ್ಸಂಗ ಸಮಾವೇಶ ನಡೆಯಲಿರುವುದು. ಡಾ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಧರ್ಮಸ್ಥಳ ಕ್ಷೇತ್ರದ ಹೇಮಾವತಿ ವಿ. ಹೆಗ್ಗಡೆ, ಸಂಸದ ನಳಿನ್‌ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್‌ಕುಮಾರ್ ಭಂಡಾರಿ ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 6.30ರಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ವಿದ್ಯಾರ್ಥಿಗಳಿಂದ ಎಸ್‌ಡಿಎಂ ಕಲಾ ವೈಭವ ಕಾರ್ಯಕ್ರಮ ನಡೆಯಲಿರುವುದು ಎಂದವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಭಜನಾ ಪರಿಷತ್‌ನ ಕಾರ್ಯದರ್ಶಿ ಯತೀಶ್ ರೈ ದುಗಲಡ್ಕ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಸಂತೋಷ್‌ಕುಮಾರ್ ರೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

27 minutes ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

32 minutes ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

9 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

10 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

11 hours ago