ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಸತ್ಸಂಗ ಸಮಿತಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ಇದರ ವತಿಯಿಂದ ಭಜನಾ ಸತ್ಸಂಗ ಸಮಾವೇಶ -2020, ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಭಜನಾ ಸಂಕೀರ್ತನಾ ಮೆರವಣಿಗೆಯು ಫೆ.8 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯಲಿದೆ.
ಸಮಾವೇಶದಲ್ಲಿ ಸುಳ್ಯದಿಂದ 100 ಭಜನಾಮಂಡಳಿಗಳ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ನ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ತಾಲೂಕಿನಲ್ಲಿ 78 ಭಜನಾಮಂಡಳಿಗಳು ಭಜನಾ ಪರಿಷತ್ನಲ್ಲಿ ನೊಂದಾವಣೆ ಆಗಿದೆ. ಪರಿಷತ್ನಲ್ಲಿ ನೊಂದಾವಣೆ ಆಗಿರುವ ಮತ್ತು ಇತರ ಭಜನಾ ತಂಡಗಳು ಸೇರಿ ಒಟ್ಟು ಭಜನಾ ಮಂಡಳಿಗಳು ಭಾಗವಹಿಸಲಿದೆ. ಹೊಸತಾಗಿ ಹಲವೆಡೆ ಮಕ್ಕಳ ಭಜನಾ ತಂಡಗಳು ರಚನೆ ಆಗಿದೆ. ಮಕ್ಕಳ, ಮಹಿಳೆಯರ ಮತ್ತು ಪುರುಷರ ಭಜನಾ ತಂಡಗಳು ಇವೆ. ಭಜನಾ ಪರಿಷತ್ ವತಿಯಿಂದ ಭಜನಾ ತರಬೇತಿ ನಡೆಸಲಾಗುತ್ತದೆ. ಮನೆ ಮನೆಗಳಲ್ಲಿ ಭಜನೆ, ಮದುವೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಭಜನಾ ಪರಿಷತ್ನ ಕಾರ್ಯದರ್ಶಿ ಯತೀಶ್ ರೈ ದುಗಲಡ್ಕ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಸಂತೋಷ್ಕುಮಾರ್ ರೈ ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…