Advertisement
ಕಾರ್ಯಕ್ರಮಗಳು

ಫೆ.8 : ಪುತ್ತೂರಿನಲ್ಲಿ ಭಜನಾ ಸತ್ಸಂಗ ಸಮಾವೇಶಕ್ಕೆ ಸುಳ್ಯದಿಂದ 100 ಭಜನಾ ಮಂಡಳಿಗಳು

Share

ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಸತ್ಸಂಗ ಸಮಿತಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ಇದರ ವತಿಯಿಂದ ಭಜನಾ ಸತ್ಸಂಗ ಸಮಾವೇಶ -2020, ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಭಜನಾ ಸಂಕೀರ್ತನಾ ಮೆರವಣಿಗೆಯು ಫೆ.8 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯಲಿದೆ.

ಸಮಾವೇಶದಲ್ಲಿ ಸುಳ್ಯದಿಂದ 100 ಭಜನಾಮಂಡಳಿಗಳ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‍ನ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಳ್ಯ ತಾಲೂಕಿನಲ್ಲಿ 78 ಭಜನಾಮಂಡಳಿಗಳು ಭಜನಾ ಪರಿಷತ್‍ನಲ್ಲಿ ನೊಂದಾವಣೆ ಆಗಿದೆ. ಪರಿಷತ್‍ನಲ್ಲಿ ನೊಂದಾವಣೆ ಆಗಿರುವ ಮತ್ತು ಇತರ ಭಜನಾ ತಂಡಗಳು ಸೇರಿ ಒಟ್ಟು ಭಜನಾ ಮಂಡಳಿಗಳು ಭಾಗವಹಿಸಲಿದೆ. ಹೊಸತಾಗಿ ಹಲವೆಡೆ ಮಕ್ಕಳ ಭಜನಾ ತಂಡಗಳು ರಚನೆ ಆಗಿದೆ. ಮಕ್ಕಳ, ಮಹಿಳೆಯರ ಮತ್ತು ಪುರುಷರ ಭಜನಾ ತಂಡಗಳು ಇವೆ. ಭಜನಾ ಪರಿಷತ್ ವತಿಯಿಂದ ಭಜನಾ ತರಬೇತಿ ನಡೆಸಲಾಗುತ್ತದೆ. ಮನೆ ಮನೆಗಳಲ್ಲಿ ಭಜನೆ, ಮದುವೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಭಜನಾ ಪರಿಷತ್‍ನ ಕಾರ್ಯದರ್ಶಿ ಯತೀಶ್ ರೈ ದುಗಲಡ್ಕ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಸಂತೋಷ್‍ಕುಮಾರ್ ರೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

6 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

6 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

14 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

19 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

19 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago