Advertisement
ಕೃಷಿ

ಫೆ.8 :ಪೆರ್ಲ ನಾಲಂದಲ್ಲಿ ಬೃಹತ್ ಕೃಷಿ ಮೇಳ

Share

ಪೆರ್ಲ: ವಿವೇಕಾನಂದ ವಿದ್ಯಾವರ್ಧಕ ಸಂಘ  ಪುತ್ತೂರು ಹಾಗೂ ಇದರ ಅಂಗಸಂಸ್ಥೆಯಾದ ನಾಲಂದ ಮಹಾವಿದ್ಯಾಲಯ ಪೆರ್ಲ ಇದರ ಆಶ್ರಯದಲ್ಲಿ ಫೆ.8 ರಂದು ಬೃಹತ್ ಕೃಷಿ ಮೇಳವನ್ನು ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ಇವರ  ಸಹಯೊಗದೊಂದಿಗೆ ಪೆರ್ಲ ನಾಲಂದ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.

ಕರಾವಳಿ ಭಾಗದ ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕಿನ ಕೃಷಿಕರು ಹಾಗೂ ಕೃಷಿ ಕಾರ್ಮಿಕರು ಅನುಭವಿಸುವ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಿ ಕೃಷಿ ಕ್ಷೇತ್ರವು ಎದುರಿಸುತ್ತಿರುವ ಸವಾಲುಗಳಿಗೆ ಪ್ರಾಯೋಗಿಕವಾಗಿ ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ, ಇಂದಿನ ಯುವಜನತೆಯಲ್ಲಿ ಕೃಷಿ ಕ್ಷೇತ್ರದ ಬಗ್ಗೆ ಆಸಕ್ತಿಯನ್ನು ಮೂಡಿಸಿ ಬೆಳೆಸುವ ಉದ್ದೇಶದಿಂದ, ವಿದ್ಯಾರ್ಥಿಗಳು ಹಾಗು ಕೃಷಿಕರು ಸೃಜನಾತ್ಮಕವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂಬ ಮೂಲ ಉದ್ದೇಶದೊಂದಿಗೆ ಈ ಬೃಹತ್ ಕೃಷಿ ಮೇಳವನ್ನು ಆಯೋಜಿಸಲಾಗಿದೆ.

ಕೃಷಿ ಮೇಳದಲ್ಲಿ ವಿಶೇಷವಾಗಿ ಕೃಷಿ ಯಂತ್ರೋಪಕರಣಗಳು, ವಿವಿಧ ತಳಿಯ ಬೀಜಗಳು, ನರ್ಸರಿ ಗಿಡಗಳು, ವಿವಿಧ ಕೃಷಿ ಉತ್ಪನ್ನಗಳು, ವಿಶೇಷ ಖಾದ್ಯಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆ ಇರುತ್ತದೆ. ಕೃಷಿಕರ ಸೃಜನಾತ್ಮಕ ಆಲೋಚನೆಗಳನ್ನು ಸಮಾಜಕ್ಕೆ ತಲುಪಿಸುವ ಗುರಿಯನ್ನು ಹೊಂದಿರುವ ಈ ಕೃಷಿ ಮೇಳದಲ್ಲಿ ಸಂವಾದದ ಮುಖಾಂತರ ಕೃಷಿಕರು ತಮ್ಮ ಸಮಸ್ಯೆಗಳನ್ನು ಪ್ರಸ್ತುತಪಡಿಸಿ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೃಷಿ ವಿಚಾರ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ ಬೆಳೆಗಳ ಸಂಬಂಧಿತ ಕೃಷಿ ಉತ್ಪನ್ನಗಳ ವಿಶೇಷ ಪ್ರದರ್ಶನಕ್ಕೆ ಆಕರ್ಷಕ ಬಹುಮಾನ ನೀಡಿ ಪ್ರೇರೇಪಿಸುವ ನವೀನ ಯೋಚನೆಯನ್ನು ಹೊಂದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರ ಭಾಗವಹಿಸುವಿಕೆಯನ್ನು ನಿರೀಕ್ಷಿಸಲಾಗಿದೆ.

ಮೇಳದಲ್ಲಿ ಹಲವಾರು ಸೃಜನಾತ್ಮಕ ಕೃಷಿ ಸಂಬಂಧಿತ ಪ್ರದರ್ಶನಗಳು ಹಾಗೂ ಕೃಷಿಯಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

6 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

12 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

16 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

20 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago