Advertisement
ಕೃಷಿ

ಫೆ.8 :ಪೆರ್ಲ ನಾಲಂದಲ್ಲಿ ಬೃಹತ್ ಕೃಷಿ ಮೇಳ

Share

ಪೆರ್ಲ: ವಿವೇಕಾನಂದ ವಿದ್ಯಾವರ್ಧಕ ಸಂಘ  ಪುತ್ತೂರು ಹಾಗೂ ಇದರ ಅಂಗಸಂಸ್ಥೆಯಾದ ನಾಲಂದ ಮಹಾವಿದ್ಯಾಲಯ ಪೆರ್ಲ ಇದರ ಆಶ್ರಯದಲ್ಲಿ ಫೆ.8 ರಂದು ಬೃಹತ್ ಕೃಷಿ ಮೇಳವನ್ನು ಕ್ಯಾಂಪ್ಕೋ ನಿಯಮಿತ ಮಂಗಳೂರು ಹಾಗೂ ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ಇವರ  ಸಹಯೊಗದೊಂದಿಗೆ ಪೆರ್ಲ ನಾಲಂದ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ.

ಕರಾವಳಿ ಭಾಗದ ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕಿನ ಕೃಷಿಕರು ಹಾಗೂ ಕೃಷಿ ಕಾರ್ಮಿಕರು ಅನುಭವಿಸುವ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಿ ಕೃಷಿ ಕ್ಷೇತ್ರವು ಎದುರಿಸುತ್ತಿರುವ ಸವಾಲುಗಳಿಗೆ ಪ್ರಾಯೋಗಿಕವಾಗಿ ಪರಿಹಾರವನ್ನು ಕಂಡುಕೊಳ್ಳುವ ಸಲುವಾಗಿ, ಇಂದಿನ ಯುವಜನತೆಯಲ್ಲಿ ಕೃಷಿ ಕ್ಷೇತ್ರದ ಬಗ್ಗೆ ಆಸಕ್ತಿಯನ್ನು ಮೂಡಿಸಿ ಬೆಳೆಸುವ ಉದ್ದೇಶದಿಂದ, ವಿದ್ಯಾರ್ಥಿಗಳು ಹಾಗು ಕೃಷಿಕರು ಸೃಜನಾತ್ಮಕವಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂಬ ಮೂಲ ಉದ್ದೇಶದೊಂದಿಗೆ ಈ ಬೃಹತ್ ಕೃಷಿ ಮೇಳವನ್ನು ಆಯೋಜಿಸಲಾಗಿದೆ.

ಕೃಷಿ ಮೇಳದಲ್ಲಿ ವಿಶೇಷವಾಗಿ ಕೃಷಿ ಯಂತ್ರೋಪಕರಣಗಳು, ವಿವಿಧ ತಳಿಯ ಬೀಜಗಳು, ನರ್ಸರಿ ಗಿಡಗಳು, ವಿವಿಧ ಕೃಷಿ ಉತ್ಪನ್ನಗಳು, ವಿಶೇಷ ಖಾದ್ಯಗಳ ಪ್ರದರ್ಶನ ಹಾಗೂ ಮಾರಾಟ ವ್ಯವಸ್ಥೆ ಇರುತ್ತದೆ. ಕೃಷಿಕರ ಸೃಜನಾತ್ಮಕ ಆಲೋಚನೆಗಳನ್ನು ಸಮಾಜಕ್ಕೆ ತಲುಪಿಸುವ ಗುರಿಯನ್ನು ಹೊಂದಿರುವ ಈ ಕೃಷಿ ಮೇಳದಲ್ಲಿ ಸಂವಾದದ ಮುಖಾಂತರ ಕೃಷಿಕರು ತಮ್ಮ ಸಮಸ್ಯೆಗಳನ್ನು ಪ್ರಸ್ತುತಪಡಿಸಿ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೃಷಿ ವಿಚಾರ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ.

ಸ್ಥಳೀಯ ಬೆಳೆಗಳ ಸಂಬಂಧಿತ ಕೃಷಿ ಉತ್ಪನ್ನಗಳ ವಿಶೇಷ ಪ್ರದರ್ಶನಕ್ಕೆ ಆಕರ್ಷಕ ಬಹುಮಾನ ನೀಡಿ ಪ್ರೇರೇಪಿಸುವ ನವೀನ ಯೋಚನೆಯನ್ನು ಹೊಂದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರ ಭಾಗವಹಿಸುವಿಕೆಯನ್ನು ನಿರೀಕ್ಷಿಸಲಾಗಿದೆ.

ಮೇಳದಲ್ಲಿ ಹಲವಾರು ಸೃಜನಾತ್ಮಕ ಕೃಷಿ ಸಂಬಂಧಿತ ಪ್ರದರ್ಶನಗಳು ಹಾಗೂ ಕೃಷಿಯಲ್ಲಿ ವಿಶೇಷ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

4 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

12 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

12 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

14 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

21 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

21 hours ago