Advertisement
ಸುದ್ದಿಗಳು

ಫೆ. 8 : ಪೆರ್ಲ ನಾಲಂದ ಕಾಲೇಜಿನಲ್ಲಿ ಬೃಹತ್ ‘ಕೃಷಿ ಮೇಳ’

Share

ಪೆರ್ಲ: ಪೆರ್ಲ ನಾಲಂದ ಮಹಾವಿದ್ಯಾಲಯ, ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಹಾಗೂ ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ನ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಫೆ. 8 ಶನಿವಾರ ಪೆರ್ಲ ನಾಲಂದ ಕಾಲೇಜು ಆವರಣದಲ್ಲಿ ಬೃಹತ್ ‘ಕೃಷಿ ಮೇಳ’ ನಡೆಯಲಿದೆ.

Advertisement
Advertisement

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಟ್ರಸ್ಟಿ, ನಾಲಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ. ಟಿ. ರವಿ ಸಮಾರಂಭ ಉದ್ಘಾಟಿಸಲಿದ್ದಾರೆ.

ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷ ಸತೀಶ್ಚಂದ್ರ ಎಸ್. ಆರ್. ದಿಕ್ಸೂಚಿ ಭಾಷಣ ಮಾಡಲಿದ್ದು, ಕಾಸರಗೋಡು ಎ. ಆರ್. ಜನರಲ್ ಜಯಚಂದ್ರನ್ ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

10.55ರಿಂದ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ನಿರ್ದೇಶಕ ಸತೀಶ್ಚಂದ್ರ ಭಂಡಾರಿ ಅಧ್ಯಕ್ಷತೆಯಲ್ಲಿ ಅಡಿಕೆ ಕೃಷಿಯಲ್ಲಿ ಆಧುನಿಕತೆ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಹಿರಿಯ ವಿಜ್ಞಾನಿ, ಕಾಸರಗೋಡು ಐಸಿಎಆರ್- ಸಿಪಿಸಿಆರ್ ಐ, ಡಾ. ರವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ (ಲಿ), ನೀರ್ಚಾಲು ಇದರ ಅಧ್ಯಕ್ಷ ಜಯದೇವ ಖಂಡಿಗೆ ಹಾಗೂ ರಾಧಾಕೃಷ್ಣ ಭಂಡಾರದಮನೆ- ಖಂಡೇರಿ ಉಪಸ್ಥಿತರಿರುವರು.

ಮಧ್ಯಾಹ್ನ 12.05 ರಿಂದ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ನಿರ್ದೇಶಕ ಪದ್ಮರಾಜ ಪಟ್ಟಾಜೆ ಅಧ್ಯಕ್ಷತೆಯಲ್ಲಿ ಕೊಕ್ಕೊ ಕೃಷಿ ಸವಾಲುಗಳು ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಹಿರಿಯ ವಿಜ್ಞಾನಿ, ವಿಟ್ಲ ಸಿಪಿಸಿಆರ್ ಐ, ಡಾ. ನಾಗರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿಲಿದ್ದು, ಪ್ರಗತಿಪರ ಕೃಷಿಕ ಪೆರುವೋಡಿ ಸದಾನಂದ ಆಳ್ವ ಉಪಸ್ಥಿತರಿರುವರು.

ಅಪರಾಹ್ನ 1.05 ರಿಂದ ಲೇಖಕಿ ಕೃಷ್ಣವೇಣಿ ಕಿದೂರು ಅಧ್ಯಕ್ಷತೆಯಲ್ಲಿ ಕೈತೋಟ ಕೃಷಿಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಖ್ಯಾತ ಲೇಖಕಿ ಸವಿತಾ ಭಟ್ ಅಡ್ವಾಯಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿಲಿದ್ದು, ಪ್ರಗತಿಪರ ಕೃಷಿಕರಾದ ಪುಷ್ಪಾ ಕೊಮ್ಮಂಗಳ ಉಪಸ್ಥಿತರಿರುವರು.

2.15 ರಿಂದ ‘ಸುಭಿಕ್ಷಾ’, ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ ಸಂಘ (ನಿ), ತೀರ್ಥಹಳ್ಳಿ ಇದರ ನಿರ್ದೇಶಕಿ ಸವಿತಾ ಬಾಳಿಕೆ ಅಧ್ಯಕ್ಷತೆಯಲ್ಲಿ ಸಾವಯವ ಕೃಷಿ ಪದ್ಧತಿ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಪ್ರಗತಿಪರ ಕೃಷಿಕ ದಾಮೋದರ ಉಜಾರ್ಲೆ ಉಪಸ್ಥಿತರಿರುವರು.

ಸಾಯಂಕಾಲ 3.30 ರಿಂದ ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಟ್ರಸ್ಟಿ, ನಾಲಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ಜರಗಲಿದೆ. ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಕೃಷಿ ಸಾಧಕರನ್ನು ಸನ್ಮಾನಿಸಲಿದ್ದಾರೆ.

ನಬಾರ್ಡ್ ಎ. ಜಿ. ಎಂ. ಜ್ಯೋತಿಷ್ ಜಗನ್ನಾಥ್ ಸಮಾರೋಪ ಭಾಷಣ ಮಾಡಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಹಾಗೂ ಪ್ರಗತಿಪರ ಕೃಷಿಕ ಡಾ. ಚಂದ್ರಶೇಖರ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಉಪಾಧ್ಯಕ್ಷ ಶಂ. ನಾ. ಖಂಡಿಗೆ ಉಪಸ್ಥಿತರಿರುವರು.

ಗೋಷ್ಠಿಗಳೊಂದಿಗೆ ಕೃಷಿ ಯಂತ್ರೋಪಕರಣಗಳು, ಬೀಜಗಳು, ನರ್ಸರಿ ಗಿಡಗಳು, ವಿವಿಧ ಕೃಷಿ ಉತ್ಪನ್ನಗಳು, ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟವೂ ನಡೆಯಲಿದೆ. ಸ್ಥಳೀಯ ಉತ್ತಮ ಕೃಷಿ ಉತ್ಪನ್ನಗಳ ( ಅಡಿಕೆ, ತೆಂಗು, ಕೊಕ್ಕೋ, ಬಾಳೆ ) ಪ್ರದರ್ಶನಕ್ಕೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago