Advertisement
ಸುದ್ದಿಗಳು

ಫೆ. 8 : ಪೆರ್ಲ ನಾಲಂದ ಕಾಲೇಜಿನಲ್ಲಿ ಬೃಹತ್ ‘ಕೃಷಿ ಮೇಳ’

Share

ಪೆರ್ಲ: ಪೆರ್ಲ ನಾಲಂದ ಮಹಾವಿದ್ಯಾಲಯ, ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಹಾಗೂ ಪೆರ್ಲ ಸೇವಾ ಸಹಕಾರಿ ಬ್ಯಾಂಕ್ ನ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಫೆ. 8 ಶನಿವಾರ ಪೆರ್ಲ ನಾಲಂದ ಕಾಲೇಜು ಆವರಣದಲ್ಲಿ ಬೃಹತ್ ‘ಕೃಷಿ ಮೇಳ’ ನಡೆಯಲಿದೆ.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಟ್ರಸ್ಟಿ, ನಾಲಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ. ಟಿ. ರವಿ ಸಮಾರಂಭ ಉದ್ಘಾಟಿಸಲಿದ್ದಾರೆ.

ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಅಧ್ಯಕ್ಷ ಸತೀಶ್ಚಂದ್ರ ಎಸ್. ಆರ್. ದಿಕ್ಸೂಚಿ ಭಾಷಣ ಮಾಡಲಿದ್ದು, ಕಾಸರಗೋಡು ಎ. ಆರ್. ಜನರಲ್ ಜಯಚಂದ್ರನ್ ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

10.55ರಿಂದ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ನಿರ್ದೇಶಕ ಸತೀಶ್ಚಂದ್ರ ಭಂಡಾರಿ ಅಧ್ಯಕ್ಷತೆಯಲ್ಲಿ ಅಡಿಕೆ ಕೃಷಿಯಲ್ಲಿ ಆಧುನಿಕತೆ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಹಿರಿಯ ವಿಜ್ಞಾನಿ, ಕಾಸರಗೋಡು ಐಸಿಎಆರ್- ಸಿಪಿಸಿಆರ್ ಐ, ಡಾ. ರವಿ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ (ಲಿ), ನೀರ್ಚಾಲು ಇದರ ಅಧ್ಯಕ್ಷ ಜಯದೇವ ಖಂಡಿಗೆ ಹಾಗೂ ರಾಧಾಕೃಷ್ಣ ಭಂಡಾರದಮನೆ- ಖಂಡೇರಿ ಉಪಸ್ಥಿತರಿರುವರು.

ಮಧ್ಯಾಹ್ನ 12.05 ರಿಂದ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ನಿರ್ದೇಶಕ ಪದ್ಮರಾಜ ಪಟ್ಟಾಜೆ ಅಧ್ಯಕ್ಷತೆಯಲ್ಲಿ ಕೊಕ್ಕೊ ಕೃಷಿ ಸವಾಲುಗಳು ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಹಿರಿಯ ವಿಜ್ಞಾನಿ, ವಿಟ್ಲ ಸಿಪಿಸಿಆರ್ ಐ, ಡಾ. ನಾಗರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿಲಿದ್ದು, ಪ್ರಗತಿಪರ ಕೃಷಿಕ ಪೆರುವೋಡಿ ಸದಾನಂದ ಆಳ್ವ ಉಪಸ್ಥಿತರಿರುವರು.

ಅಪರಾಹ್ನ 1.05 ರಿಂದ ಲೇಖಕಿ ಕೃಷ್ಣವೇಣಿ ಕಿದೂರು ಅಧ್ಯಕ್ಷತೆಯಲ್ಲಿ ಕೈತೋಟ ಕೃಷಿಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಖ್ಯಾತ ಲೇಖಕಿ ಸವಿತಾ ಭಟ್ ಅಡ್ವಾಯಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿಲಿದ್ದು, ಪ್ರಗತಿಪರ ಕೃಷಿಕರಾದ ಪುಷ್ಪಾ ಕೊಮ್ಮಂಗಳ ಉಪಸ್ಥಿತರಿರುವರು.

2.15 ರಿಂದ ‘ಸುಭಿಕ್ಷಾ’, ಸಾವಯವ ಕೃಷಿಕರ ಬಹುರಾಜ್ಯ ಸಹಕಾರಿ ಸಂಘ (ನಿ), ತೀರ್ಥಹಳ್ಳಿ ಇದರ ನಿರ್ದೇಶಕಿ ಸವಿತಾ ಬಾಳಿಕೆ ಅಧ್ಯಕ್ಷತೆಯಲ್ಲಿ ಸಾವಯವ ಕೃಷಿ ಪದ್ಧತಿ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ನಡೆಯಲಿದೆ. ಪ್ರಗತಿಪರ ಕೃಷಿಕ ದಾಮೋದರ ಉಜಾರ್ಲೆ ಉಪಸ್ಥಿತರಿರುವರು.

ಸಾಯಂಕಾಲ 3.30 ರಿಂದ ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಟ್ರಸ್ಟಿ, ನಾಲಂದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಆನೆಮಜಲು ವಿಷ್ಣು ಭಟ್ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ಜರಗಲಿದೆ. ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಕೃಷಿ ಸಾಧಕರನ್ನು ಸನ್ಮಾನಿಸಲಿದ್ದಾರೆ.

ನಬಾರ್ಡ್ ಎ. ಜಿ. ಎಂ. ಜ್ಯೋತಿಷ್ ಜಗನ್ನಾಥ್ ಸಮಾರೋಪ ಭಾಷಣ ಮಾಡಲಿದ್ದು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಹಾಗೂ ಪ್ರಗತಿಪರ ಕೃಷಿಕ ಡಾ. ಚಂದ್ರಶೇಖರ ಚೌಟ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇದರ ಉಪಾಧ್ಯಕ್ಷ ಶಂ. ನಾ. ಖಂಡಿಗೆ ಉಪಸ್ಥಿತರಿರುವರು.

ಗೋಷ್ಠಿಗಳೊಂದಿಗೆ ಕೃಷಿ ಯಂತ್ರೋಪಕರಣಗಳು, ಬೀಜಗಳು, ನರ್ಸರಿ ಗಿಡಗಳು, ವಿವಿಧ ಕೃಷಿ ಉತ್ಪನ್ನಗಳು, ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟವೂ ನಡೆಯಲಿದೆ. ಸ್ಥಳೀಯ ಉತ್ತಮ ಕೃಷಿ ಉತ್ಪನ್ನಗಳ ( ಅಡಿಕೆ, ತೆಂಗು, ಕೊಕ್ಕೋ, ಬಾಳೆ ) ಪ್ರದರ್ಶನಕ್ಕೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

13 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

22 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

22 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

22 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

22 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago