ಸುಳ್ಯ: ಎಲಿಮಲೆಯ ರಂಜನಿ ಸಂಗೀತ ಸಭಾದ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ, ಗೌರವಾರ್ಪಣೆ ಮತ್ತು ಸಂಗೀತ ಸಂಭ್ರಮ ಫೆ.9 ರಂದು ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸಭಾಭವನದ ಕದ್ರಿ ಗೋಪಾಲನಾಥ್ ಕಲಾವೇದಿಕೆಯಲ್ಲಿ ನಡೆಯಲಿದೆ.
ಬೆಳಗ್ಗೆ 7.30ಕ್ಕೆ ದೀಪೋಜ್ವಲನ, ಗುರುವಂದನ ಕಾರ್ಯಕ್ರಮ ನಡೆಯಲಿದೆ. ಬಳಿಕ ವಿದ್ಯಾರ್ಥಿಗಳಿಂದ ಸಂಗೀತ ಗಾಯನ ನಡೆಯಲಿದೆ. ಸಂಜೆ 5ರಿಂದ ನಿವೃತ್ತ ಮುಖ್ಯ ಶಿಕ್ಷಕ ಪದ್ಯಾಣ ನಾರಾಯಣ ಭಟ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಮತ್ತು ಗೌರವಾರ್ಪಣೆ ನಡೆಯಲಿದೆ. ಸುನಾದ ಸಂಗೀತ ಶಾಲೆಯ ಸಂಚಾಲಕ ವಿದ್ವಾನ್ ಕಾಂಚನ ಎ.ಈಶ್ವರ ಭಟ್, ವೈದಿಕ ವಿದ್ವಾಂಸ ವೇದ ಮೂರ್ತಿ ಕರುವಜೆ ಕೇಶವ ಜೋಯಿಸ, ಸಂಗೀತ ಕಲಾವಿದ ಯಜ್ಞೇಶ್ ಆಚಾರ್ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕೇಶವ ಹೊಸೊಳಿಕೆ, ಕಾಸರಗೋಡು ಗೋಪಾಲಕೃಷ್ಣ ಸಂಗೀತ ವಿದ್ಯಾಲಯದ ನಿರ್ದೇಶಕ ಬಿ.ಜಿ.ಈಶ್ವರ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗಾಯತ್ರಿ ವೆಂಕಟರಾಘವನ್ ಸಂಗೀತ ಕಛೇರಿ:
ಸಭಾ ಕಾರ್ಯಕ್ರಮದ ಬಳಿಕ ಸಂಜೆ. 6 ರಿಂದ ವಿದುಷಿ ಗಾಯತ್ರಿ ವೆಂಕಟರಾಘವನ್ ಚೆನ್ನೈ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಲಿದೆ. ವಯಲಿನ್ ನಲ್ಲಿ ವಿದ್ವಾನ್ ಮೈಸೂರು ವಿ.ಶ್ರೀಕಾಂತ್ ಚೆನ್ನೈ, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಪುತ್ತೂರು, ಘಟಂನಲ್ಲಿ ವಿದ್ವಾನ್ ಉಡುಪಿ ಶ್ರೀಧರ್ ತಿರುವನಂತಪುರ ಸಹಕರಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ದಿನಪೂರ್ತಿ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ರಂಜನಿ ಸಂಗೀತ ಸಭಾದ ನಿರ್ದೇಶಕ ಸತ್ಯನಾರಾಯಣ ಹೊನ್ನಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…