Advertisement

ಫೋಟೋಗ್ರಾಫರ್ಸ್ ಅಸೋಸಿಯೇಶನ್‍ನ ಮುಂಗಾರು ಕ್ರೀಡಾಕೂಟ

Share

ಸುಳ್ಯ: ಬದಲಾದ ಕಾಲಮಾನಕ್ಕೆ ತಕ್ಕಂತೆ ಛಾಯಾಗ್ರಾಹಕರು ತಮ್ಮ ಉದ್ದಿಮೆಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕಿದೆ. ನಿತ್ಯವೂ ಚಟುವಟಿಕೆಯಿಂದಿರುವ ವೃತ್ತಿ ಭಾಂಧವರು ಕ್ರೀಡೆಯಂತಹ ಕಾರ್ಯಕ್ರಮಗಳನ್ನು ನಿರಂತರ ನಡೆಸುತ್ತಿರಬೇಕು. ಇದು ಆರೋಗ್ಯ ಕಾಪಾಡಲು ಸೂಕ್ತ ಸಾಧನ ಎಂದು ಎಒಎಲ್‍ಇ ಅಧ್ಯಕ್ಷ ಡಾ.ಚಿದಾನಂದ ಹೇಳಿದರು.

Advertisement

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‍ನ ಸುಳ್ಯ ವಲಯ ಆಶ್ರಯದಲ್ಲಿ ಕೊಡಿಯಾಲಬೈಲು ಮಹಾತ್ಮಗಾಂಧಿ ಮಲ್ನಾಡ್ ಹೈಸ್ಕೂಲ್ ಕ್ರೀಡಾಂಗಣದಲ್ಲಿ ರವಿವಾರ ನಡೆದ ಜಿಲ್ಲಾಮಟ್ಟದ ಮುಂಗಾರು ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿದ್ದ ಶಾಸಕ ಎಸ್ ಅಂಗಾರ ಅವರು ವೃತ್ತಿ ಸೇವೆಗಳ ಜತೆ ಕ್ರೀಡಾ ಹಿತಾಶಕ್ತಿ ಅಗತ್ಯ. ಇದನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪೊಟೋಗ್ರಾಫರ್ ಎಸೋಶೀಯೇಷನ್ ಕ್ರೀಡೆಗೆ ಒತ್ತು ನೀಡಿರುವುದ ಸ್ವಾಗತಾರ್ಹ ಎಂದರು.

ದ.ಕ-ಉಡುಪಿ ಎಸ್.ಕೆ.ಪಿ.ಎ ಅಧ್ಯಕ್ಷ ವಿಲ್ಸನ್ ಗೋನ್ಸಾಲ್ವಿಸ್ ಅಧ್ಯಕ್ಷತೆ ವಹಿಸಿದ್ದರು ಮುಖ್ಯಅತಿಥಿಗಳಾಗಿ ಎಸ್.ಕೆ.ಪಿ.ಎ ಸಂಚಾಲಕ ವಿಠಲ ಚೌಟ, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಲಯನ್ಸ್ ಜಿಲ್ಲಾ ಮಾಜಿ ರಾಜ್ಯಪಾಲ ಎ.ಬಿ.ಸದಾಶಿವ, ಪ ಜಿಲ್ಲಾ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಸುಳ್ಯ, ಸುಳ್ಯ ವಲಯಾಧ್ಯಕ್ಷ ಕರುಣಾಕರ ಎಣ್ಣೆಮಜಲು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲೊಕೇಶ್ ಸುಬ್ರಹ್ಮಣ್ಯ, ಸುಳ್ಯ ವಲಯ ಗೌರವಾಧ್ಯಕ್ಷ ಬಾಲಕೃಷ್ಣ ಗುತ್ತಿಗಾರು, ವಲಯ ಕಾರ್ಯದರ್ಶಿ ಪ್ರಕಾಶ್, ಪೂರ್ವಾಧ್ಯಕ್ಷರುಗಳಾದ ವಾಸುದೇವ, ಶಿವರಾಮ ಕಡಬ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಪ್ರವೀಣ್ ಕೊರೆಯಾ, ಜಯಕರ ಸುವರ್ಣ ವೇದಿಕೆಯಲ್ಲಿದ್ದರು.

ಉದ್ಘಾಟನೆಗೆ ಮೊದಲು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಮುಂಭಾಗದಿಂದ ಗೌಡ ಸಮುದಾಯ ಭವನದ ತನಕ ವಾಹನ ಜಾಥ ನಡೆಯಿತು. ಸುಳ್ಯ ಸಬ್ ಇನ್ಸ್ ಪೆ ಕ್ಟರ್ ಹರೀಶ್‍ಕುಮಾರ್ ಜಾಥಕ್ಕೆ ಚಾಲನೆ ನೀಡಿದರು.

ಸನ್ಮಾನ: ಸಮಾರಂಭದಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟು ಪ್ರತೀಕ್ ದೇವ ಹಾಗೂ ರಾಷ್ಟ್ರ ಮಟ್ಟ ವೇಟ್ ಲಿಪ್ಟರ್ ಲಾವಣ್ಯ, 179ನೇ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ, ಸ್ಠುಡಿಯೋ ಮಾಲಕ ಗೋಪಾಲಕೃಷ್ಣ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ಕ್ರಿಕೆಟ್, ವಾಲಿಬಾಲ್, ಲಗೋರಿ, ಹಗ್ಗಜಗ್ಗಾಟ ತಂಡ ಸ್ಪರ್ಧೆ , 50ವರ್ಷ ಮೇಲ್ಪಟ್ಟ ಸದಸ್ಯರಿಗೆ ಸಂಗೀತ ಕುರ್ಚಿ, ಮಡಿಕೆ ಒಡೆಯುವುದು, ಶಾಟ್ ಪುಟ್ ಕ್ರೀಡಾ ಸ್ಪರ್ಧೇಗಳು ನಡೆಯಿತು.

ಸುಳ್ಯ ವಲಯಾಧ್ಯಕ್ಷ ಕರುಣಾಕರ ಎಣ್ಣೆಮಜಲು ಪ್ರಸ್ತಾವನೆಗೈದು ಸ್ವಾಗತಿಸಿದರು. ತನಂಜಯ್ ರಾವ್ ವಂದಿಸಿದರು. ಸುಧೀರ್ ಕುಮಾರ್ ಶೆಟ್ಟಿ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

5 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

5 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

5 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

5 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago