ಭುವನೇಶ್ವರ : ಫೋನಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಒಡಿಸ್ಸಾದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರದಿಂದ 1000 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಈ ಹಿಂದೆ 381 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರಕಾರದಿಂದ ಘೋಷಿಸಿದ್ದ ಪ್ರಧಾನಿ ಸೋಮವಾರ ಹೆಚ್ಚುವರಿಯಾಗಿ ಪರಿಹಾರ ಧನ ಘೋಷಿಸಿದ್ದಾರೆ. ಇದರ ಜೊತೆಗೆ ಜನರ ಆರೋಗ್ಯ ಸುಧಾರಣೆಗೂ ಪರಿಹಾರ ನೀಡುವುದಾಗಿ ಇದೇ ವೇಳೆ ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಪರಿಹಾರ ಕಾರ್ಯ ನಡೆಸಲಿದ್ದು, ಕೇಂದ್ರ ಸರಕಾರದಿಂದ ಒಂದು ತಂಡ ರಾಜ್ಯಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೆಲಸ ಮಾಡಲಿದೆ ಎಂದು ಇದೇ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel