Advertisement
ಸುದ್ದಿಗಳು

ಫ್ರೆಂಚ್ ಓಪನ್ ಫೈನಲ್‌ಗೆ ಭಾರತೀಯ ಜೋಡಿ

Share

ಪ್ಯಾರಿಸ್: ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಡಬಲ್ಸ್ ವಿಭಾಗದಲ್ಲಿ ಭಾರತದ ದಿರಾಗ್ ಶೆಟ್ಟಿ- ಸಾತ್ವಿಕ್‌ ರಾಜ್ ರಂಕಿರೆಡ್ಡಿ ಜೋಡಿ ಅಚ್ಚರಿಯ ಜಯ ಸಾಧಿಸಿ ಫೈನಲ್‌ಗೆ ಮುನ್ನಡೆದಿದೆ.

ಭಾರತೀಯ ಜೋಡಿ ಜಪಾನ್‌ನ ಹಿರೊಯುಕಿ ಎಂಡೊ ಮತ್ತು ಯುತಾ ವಟಾನಬ್ ಜೋಡಿಯನ್ನು 21-11, 25-23 ಅಂತರದಲ್ಲಿ ಸೆಮಿಫೈನಲ್‌ನಲ್ಲಿ ಮಣಿಸಿ ಫೈನಲ್‌ಗೆ ಅರ್ಹತೆ ಪಡೆಯಿತು.

ಮೊದಲ ಸೆಟ್‌ನಲ್ಲಿ ಸುಲಭವಾಗಿ ಗೆದ್ದ ಭಾರತೀಯ ಜೋಡಿ ಗೆಲುವಿನ ಓಟ ಮುಂದುವರಿಸಿ 49 ನಿಮಿಷಗಳಲ್ಲಿ ಪಂದ್ಯ ಗೆದ್ದಿತು. ಶುಕ್ರವಾರ ಭಾರತದ ಪಿ.ವಿ.ಸಿಂಧು ಹಾಗೂ ಸೈನಾ ನೆಹ್ವಾಲ್ ಇಬ್ಬರೂ ಕ್ವಾರ್ಟರ್ ಫೈನಲ್ ಹಂತದಲ್ಲಿ ನಿರ್ಗಮಿಸಿದ್ದರು. ಭಾರತದ ಕಿಡಂಬಿ ಶ್ರೀಕಾಂತ್ ಮೊದಲ ಸುತ್ತಿನಲ್ಲೇ ಥೈವಾನ್‌ನ ಚೊವ್ ತೀನ್ ಚೆನ್‌ಗೆ ಸೋತು ಹೊರ ನಡೆದಿದ್ದರು. ಭಾರತದ ಮತ್ತೊಬ್ಬ ಆಟಗಾರ ಪರುಪಳ್ಳಿ ಕಶ್ಯಪ್ ಅವರು ಹಾಂಕಾಂಗ್‌ನ ಎನ್‌ಜಿ ಕಾ ಲಾಂಗ್ ಅಂಗಸ್ ವಿರುದ್ಧ 11-21, 9-21 ಅಂತರದಿಂದ ಸೋತಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

2 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

5 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

10 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

20 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

20 hours ago